SHIVAMOGGA LIVE | 9 JULY 2023
SAGARA : ಕೆಲವು ದಿನದಿಂದ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ಹುಚ್ಚು ಹಸುವೊಂದನ್ನು (Cow) ಮೂವರು ಯುವಕರು ಸಾರ್ವಜನಿಕರ ಸಹಕಾರದೊಂದಿಗೆ ಹರಸಾಹಸ ಪಟ್ಟು ಹಿಡಿದಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ನಾಲ್ಕೈದು ದಿನದಿಂದ ಸಾಗರ ಪಟ್ಟಣದ ವಿವಿಧೆಡೆ ಹುಚ್ಚು ಹಿಡಿದ ಹಸುವೊಂದು ಉಪಟಳ ನೀಡುತ್ತಿತ್ತು. ಜನರು, ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿತ್ತು. ಶುಕ್ರವಾರ ಬೆಳಗ್ಗೆ ಮಂಕಳಲೆ ಭಾಗದಲ್ಲಿ ಹಸು ತೊಂದರೆ ಕೊಟ್ಟಿತ್ತು. ಮಧ್ಯಾಹ್ನದ ವೇಳೆಗೆ ವಿನೋಬಗರದಲ್ಲಿ ಪುಂಡಾಟ ಮಾಡಿತ್ತು.
ಗಾಂಧಿ ನಗರದ ಆನಂದ್, ಮಾರುತಿ ಮತ್ತು ಪವನ್ ಎಂಬುವವರು ಬಲೆ ಬೀಸಿ, ಚಾಣಾಕ್ಷತನದಿಂದ ಹುಚ್ಚು ಹಸುವನ್ನು ಸೆರೆ ಹಿಡಿದಿದ್ದಾರೆ. ಸುರಿಯುವ ಮಳೆಯಲ್ಲೇ ಕಾರ್ಯಾಚರಣೆ ನಡೆಸಿದ ಹಸುವನ್ನು (Cow) ಬಲೆಗೆ ಕೆಡವಿದ್ದಾರೆ. ಯುವಕರ ಕಾರ್ಯಾಚರಣೆಗೆ ಸ್ಥಳೀಯರು ಕೂಡ ನೆರವಾಗಿದ್ದರು. ಹಸು ಸೆರೆಯಾಗಿರುವುದರಿಂದ ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.
ಇದನ್ನೂ ಓದಿ – ಮೊಬೈಲ್ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ, ಸಮಗ್ರ ತನಿಖೆಗೆ ಒತ್ತಾಯ

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





