ಸಿಗಂದೂರು ಬಳಿ ಹಿನ್ನೀರಿನಲ್ಲಿ ಮೂವರು ಯುವಕರ ಮೃತದೇಹ ಪತ್ತೆ

SAGARA, 14 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಕಣ್ಮರೆಯಾಗಿದ್ದ ಮೂವರು ಯುವಕರ (Youths) ಮೃತದೇಹಗಳು ಪತ್ತೆಯಾಗಿವೆ. ಮುಳುಗು ತಜ್ಞ ಈಶ್ವರ್‌ ಮಲ್ಪೆ ಶೋಧ ಕಾರ್ಯ ನಡೆಸಿದಾಗ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಹೊಳೆ ಊಟಕ್ಕೆ ಹೋದವರು ಸಾವು

ಶರಾವತಿ ಹಿನ್ನೀರಿನ ನಡುಗಡ್ಡೆಯಲ್ಲಿ ಹೊಳೆ ಊಟ ಮುಗಿಸಿ ಮರಳುವಾಗ ತೆಪ್ಪ ಮಗುಚಿ ಮೂವರು ಯುವಕರು ಕಣ್ಮರೆಯಾಗಿದ್ದರು. ಇನ್ನಿಬ್ಬರು ಈಜಿ ದಡ ಸೇರಿದ್ದರು. ಕಣ್ಮರೆಯಾಗಿದ್ದ ಚೇತನ್‌ (28), ಸಂದೀಪ್‌ (30) ಮತ್ತು ರಾಜೀವ್‌ (34) ಇವತ್ತು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

Youths-found-in-Sharavathi-river-near-sigandur

ಮುಳುಗು ತಜ್ಞನಿಂದ ಮೃತದೇಹ ಶೋಧ

ಮುಳುಗು ತಜ್ಞ ಈಶ್ವರ್‌ ಮಲ್ಪೆ ನೇತೃತ್ವದ ತಂಡ ಇವತ್ತು ಬೆಳಗ್ಗೆ ಶರಾವತಿ ಹಿನ್ನೀರಿನಲ್ಲಿ ಶೋಧ ಕಾರ್ಯ ನಡೆಸಿತು. ಹೊಳೆ ಆಳಕ್ಕೆ ತಲುಪಿದ್ದ ಯುವಕರ ಮೃತದೇಹಗಳನ್ನು ಈ‍ಶ್ವರ್‌ ಮಲ್ಪೆ ದಡಕ್ಕೆ ತಂದಿದ್ದಾರೆ. ಯುವಕರ ಮೃತದೇಹ ಕಂಡು ಸುತ್ತಮುತ್ತಲ ಗ್ರಾಮದ ಜನರು ಮರುಗಿದರು.

sharavathi river near sigandur temple

ಕಳೆದ ರಾತ್ರಿವರೆಗೆ ನಡೆದಿದ್ದ ಕಾರ್ಯಾಚರಣೆ

ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಬುಧವಾರ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು. ಕತ್ತಲಾಗಿದ್ದರಿಂದ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹಾಗಾಗಿ ರಾತ್ರಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಇಂದು ಬೆಳಗ್ಗೆ ಮೃತದೇಹಗಳು ಪತ್ತೆಯಾಗಿವೆ. ಕಾರ್ಗಲ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

sharavathi river near sigandur temple

sharavathi river near sigandur temple

sharavathi river near sigandur temple

ಇದನ್ನೂ ಓದಿ » ಹೊಳೆ ಸ್ಟಾಪ್‌ನಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿ, ತಪ್ಪಿದ ಅನಾಹುತ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 14, 2024 at 12:11 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 14, 2024

Leave a Comment