ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿಕಾರಿಪುರ: ತಾಲೂಕಿನ ಹುಣಸೆಕಟ್ಟೆ ಗ್ರಾಮದಲ್ಲಿ ರೈತರೊಬ್ಬರು ಮನೆ ಮುಂದೆ ಒಣಗಿಸಲು ಹಾಕಿದ್ದ ಸುಮಾರು ₹2,88,000 ಮೌಲ್ಯದ ಅಡಿಕೆಯನ್ನು (arecanut) ಕಳ್ಳರು ದೋಚಿದ್ದಾರೆ. ಗ್ರಾಮದ ನಿವಾಸಿ ಭುವನೇಶ್ವರ್ ಎಂಬುವವರು ತಮ್ಮ ಮನೆ ಎದುರಿನ ಖಾಲಿ ಜಾಗದಲ್ಲಿ ಒಣಗಲು ಹಾಕಿದ್ದ ಅಡಿಕೆಯಲ್ಲಿ ಈ ಕಳ್ಳತನ ನಡೆದಿದೆ.
ಮಾರ್ಚ್ 26ರ ರಾತ್ರಿ ಭುವನೇಶ್ವರ್ ಅವರು ಅಡಿಕೆಗೆ ಟಾರ್ಪಲ್ ಮುಚ್ಚಿ ಮನೆಗೆ ಹೋಗಿ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದು ನೋಡಿದಾಗ, ಸುಮಾರು 12 ಕ್ವಿಂಟಾಲ್ನಷ್ಟು ಒಣಗಿದ ಸಿಪ್ಪೆಗೋಟು ಅಡಿಕೆ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಕಳುವಾದ ಅಡಿಕೆಯ ಒಟ್ಟು ಮೌಲ್ಯ ₹2,88,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಅತ್ತೆ ಮನೆಯಿಂದ ಶಿವಮೊಗ್ಗದ ಮನೆಗೆ ಮರಳಿದ ವ್ಯಕ್ತಿಗೆ ಬಿಗ್ ಶಾಕ್, ಆಗಿದ್ದೇನು?


LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು















