ಶಿಕಾರಿಪುರ : ನಿರಂತರ ಮಳೆಗೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಭರ್ತಿಯಾಗಿ ಕೋಡಿ ಬಿದ್ದಿದೆ. ವಾಡಿಕೆಗು ಮೊದಲೇ ಜಲಾಶಯ ಭರ್ತಿಯಾಗಿದೆ.
ಹಿನ್ನೀರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಹಾಗಾಗಿ ಅಂಜನಾಪುರ ಜಲಾಶಯ ಭರ್ತಿಯಾಗಿದೆ. 23 ಅಡಿ ನೀರು ತುಂಬಿ ಜಲಾಶಯ ಕೋಡಿ ಬಿದ್ದಿದೆ.
ವಾಡಿಕೆಗು ಮೊದಲೆ ಭರ್ತಿ
ಅಂಜನಾಪುರ ಜಲಾಶಯ ಈ ಬಾರಿ ವಾಡಿಕೆಗಿಂತಲೂ ಮೊದಲೆ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಭರ್ತಿಯಾಗುತಿತ್ತು. ಕಳೆದ ವರ್ಷ ಜುಲೈ ಮಧ್ಯೆ ಭಾಗದಲ್ಲಿ ಕೋಡಿ ಬಿದ್ದಿತ್ತು. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಕೃಷಿ, ಕುಡಿಯುವ ನೀರಿನ ಮೂಲ
ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,732 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.
ಮೈಸೂರು ಮಹಾರಾಜರು 1936ರಲ್ಲಿ ಅಂಜನಾಪುರ ಜಲಾಶಯವನ್ನು ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 21 ಅಡಿ ಎತ್ತರವಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಸುತ್ತಮುತ್ತಲ ಗ್ರಾಮಸ್ಥರು ಅಂಜನಾಪುರ ಜಲಾಶಯಕ್ಕೆ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ » ಭದ್ರಾ ಜಲಾಶಯದ ಒಳ ಹರಿವು ತುಸು ಹೆಚ್ಚಳ, ಇವತ್ತು ಎಷ್ಟಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200