‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

jnanasoudha Karkala

ಶಿಕಾರಿಪುರ: ಸಾರಥಿ ಯೋಜನೆಯಡಿ ಸಾಲ ಮಂಜೂರಾಗದಂತೆ ತಡೆದಿದ್ದೀಯಾ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ (slippers) ನಡೆಸಿರುವ ಘಟನೆ ತಾಲೂಕಿನ ಕಾಗಿನೆಲ್ಲಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ – ಫಾರ್ಚುನರ್‌ ಕಾರಿನಲ್ಲಿ ಬಂದು ಇಂಜಿನಿಯರ್‌ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್‌?

ಕಾಗಿನೆಲ್ಲಿ ಗ್ರಾಮದ ನಾಗರಾಜ್.ಎ.ಕೆ ಎಂಬುವವರು ಗ್ರಾಮದ ವಾಲ್ಮೀಕಿ ಕಾಲೋನಿಯಲ್ಲಿ ಮೃತಪಟ್ಟಿದ್ದ ಮಹಿಳೆಯ ಶವದ ದರ್ಶನಕ್ಕೆ ಬಿ.ಆರ್. ಅಂಬೇಡ್ಕರ್ ಸರ್ಕಲ್ ಮೂಲಕ ಹೋಗುತ್ತಿದ್ದರು. ಈ ವೇಳೆ ಅದೇ ವ್ಯಕ್ತಿಯೊಬ್ಬ ನಾಗರಾಜ್ ಅವರನ್ನು ಅಡ್ಡಗಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ನನ್ನ ಅಳಿಯನಿಗೆ ಸಾರಥಿ ಯೋಜನೆಯಡಿ ಸಾಲ ಮಂಜೂರಾಗಿತ್ತು. ನೀನೆ ಶಾಸಕರಿಗೆ ಹೇಳಿ ತಡೆದಿದ್ದೀಯ ಎಂದು ಅವಾಚ್ಯ ಶಬ್ದಗಳಿಂದ ಆ ವ್ಯಕ್ತಿ ನಿಂದಿಸಿದ್ದಾರೆ. ಅಲ್ಲದೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

Crime-News-General-Image

ಈ ಘಟನೆ ಸಂಬಂಧ ನಾಗರಾಜ್ ಅವರು ನ್ಯಾಯಾಲಯದ ಅನುಮತಿ ಪಡೆದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Sunrise Facility Services, Sri sai Trust Shimoga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 8, 2026 at 9:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 8, 2026

Leave a Comment