SHIVAMOGGA LIVE NEWS | 17 JULY 2024
SHIKARIPURA : ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ಕುಟುಂಬ ಸಹಿತ ಭೇಟಿ ನೀಡಿ, ಬಾಗಿನ (Bagina) ಅರ್ಪಿಸಿದರು. ನಂತರ ಅಂಬ್ಲಿಗೋಳ ಜಲಾಶಯದಲ್ಲಿಯು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
![]() |
ಶಾಸಕ, ಸಂಸದರು ಹೇಳಿದ್ದೇನು?
ಏತ ನೀರಾವರಿಯಿಂದ ಕೆರೆಗಳು ಭರ್ತಿ
ಅಂಜನಾಪುರದಲ್ಲಿ ಬಾಗಿನ ಅರ್ಪಿಸಿದ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದರು. ಅದರ ಪರಿಣಾಮ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸಲು ಅನುಕೂಲವಾಗಿದೆ. ಇನ್ನು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಕೆಲವು ಗ್ರಾಮಗಳ ಕೆರೆಗಳನ್ನು ತುಂಬಿಸುವ ಯೋಜನೆ ಪೂರ್ಣಗೊಂಡಿಲ್ಲ. ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ ಕಾಮಗಾರಿಗು ಹಣ ಬಿಡುಗಡೆಯಾಗಿಲ್ಲ ಎಂದರು.
ಇದನ್ನೂ ಓದಿ ⇓
‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್ ಗಾರ್ಡನ್, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್ ಸೊರಗಿದ್ದೇಕೆ?
‘ರೈತರ ಸಂಕಷ್ಟ ನಿವಾರಿಸಿದ್ದಾರೆ’
ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಅಂಜನಾಪುರ ಜಲಾಶಯ ಭರ್ತಿ ಆಗಿರುವುದು ಸಂತಸ ಮೂಡಿಸಿದೆ. ರೈತರು ನೆಮ್ಮದಿಯಿಂದ ಬೆಳೆ ಬೆಳೆಯಬಹುದು. ಯಡಿಯೂರಪ್ಪ ಅವರು ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರೈತರ ಸಂಕಷ್ಟ ನಿವಾರಿಸಿದ್ದಾರೆ ಎಂದರು.
ಪ್ರಮುಖರಾದ ಕೆ.ಎಸ್.ಗುರುಮೂರ್ತಿ, ತೇಜಸ್ವಿನಿ ರಾಘವೇಂದ್ರ, ಪ್ರೇಮಾ ವಿಜಯೇಂದ್ರ, ಹುಲ್ಮಾರು ಮಹೇಶ್, ಹನುಮಂತಪ್ಪ, ಸಿದ್ಧಲಿಂಗ, ಚನ್ನವೀರಪ್ಪ, ಭೂಕಾಂತ್, ಗಾಯತ್ರಿ ಮಲ್ಲಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ಒಂದೇ ದಿನ ಶೇ.50ರಷ್ಟು ಮಳೆ ಕಡಿಮೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200