ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
SHIKARIPURA : ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ಕುಟುಂಬ ಸಹಿತ ಭೇಟಿ ನೀಡಿ, ಬಾಗಿನ (Bagina) ಅರ್ಪಿಸಿದರು. ನಂತರ ಅಂಬ್ಲಿಗೋಳ ಜಲಾಶಯದಲ್ಲಿಯು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
ಶಾಸಕ, ಸಂಸದರು ಹೇಳಿದ್ದೇನು?
ಅಂಜನಾಪುರದಲ್ಲಿ ಬಾಗಿನ ಅರ್ಪಿಸಿದ ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದರು. ಅದರ ಪರಿಣಾಮ ತಾಲೂಕಿನ ಎಲ್ಲ ಕೆರೆಗಳನ್ನು ತುಂಬಿಸಲು ಅನುಕೂಲವಾಗಿದೆ. ಇನ್ನು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭವಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಕೆಲವು ಗ್ರಾಮಗಳ ಕೆರೆಗಳನ್ನು ತುಂಬಿಸುವ ಯೋಜನೆ ಪೂರ್ಣಗೊಂಡಿಲ್ಲ. ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ಧಿ ಕಾಮಗಾರಿಗು ಹಣ ಬಿಡುಗಡೆಯಾಗಿಲ್ಲ ಎಂದರು.ಏತ ನೀರಾವರಿಯಿಂದ ಕೆರೆಗಳು ಭರ್ತಿ

ಇದನ್ನೂ ಓದಿ ⇓
‘ತುಕ್ಕು ಹಿಡಿಯುತ್ತಿದೆ’ ಅಂಜನಾಪುರ ರಾಕ್ ಗಾರ್ಡನ್, ಪ್ರವಾಸಿಗರನ್ನು ಸೆಳೆಯಬೇಕಿದ್ದ ಪಾರ್ಕ್ ಸೊರಗಿದ್ದೇಕೆ?
ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಅಂಜನಾಪುರ ಜಲಾಶಯ ಭರ್ತಿ ಆಗಿರುವುದು ಸಂತಸ ಮೂಡಿಸಿದೆ. ರೈತರು ನೆಮ್ಮದಿಯಿಂದ ಬೆಳೆ ಬೆಳೆಯಬಹುದು. ಯಡಿಯೂರಪ್ಪ ಅವರು ತಾಲೂಕಿನಲ್ಲಿ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ರೈತರ ಸಂಕಷ್ಟ ನಿವಾರಿಸಿದ್ದಾರೆ ಎಂದರು.‘ರೈತರ ಸಂಕಷ್ಟ ನಿವಾರಿಸಿದ್ದಾರೆ’

ಪ್ರಮುಖರಾದ ಕೆ.ಎಸ್.ಗುರುಮೂರ್ತಿ, ತೇಜಸ್ವಿನಿ ರಾಘವೇಂದ್ರ, ಪ್ರೇಮಾ ವಿಜಯೇಂದ್ರ, ಹುಲ್ಮಾರು ಮಹೇಶ್, ಹನುಮಂತಪ್ಪ, ಸಿದ್ಧಲಿಂಗ, ಚನ್ನವೀರಪ್ಪ, ಭೂಕಾಂತ್, ಗಾಯತ್ರಿ ಮಲ್ಲಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ಒಂದೇ ದಿನ ಶೇ.50ರಷ್ಟು ಮಳೆ ಕಡಿಮೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















