SHIVAMOGGA LIVE NEWS | 25 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIKARIPURA : ಈಸೂರು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು (BEAR) ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ ಕರಡಿಯನ್ನು ಕಾಡಿಗಟ್ಟಲಾಗಿದೆ.
ಈಸೂರು ಗ್ರಾಮದಲ್ಲಿ ಗುರುವಾರ ಕರಡಿ ಪ್ರತ್ಯಕ್ಷವಾಗಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೆ ಮೊಕ್ಕಾಂ ಹೂಡಿ ಕರಡಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಶುಕ್ರವಾರ ಸಂಜೆ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇಗುಲದ ಹಿಂಭಾಗ ಕೆರೆಯಲ್ಲಿ ಕರಡಿ ಕಾಣಿಸಿಕೊಂಡಿತ್ತು. ಕೆರೆ ಸುತ್ತಲು ಬಲೆ ಹಾಕಿ, ಕರಡಿ ಕಾಡಿಗಟ್ಟುವ ಪ್ರಯತ್ನ ನಡೆಸಲಾಯಿತು.
ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್
ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ಕರಡಿ ದಾಳಿಗೆ ಮುಂದಾಯಿತು. ಜನರ ಕೂಗಾಟ, ಅರಣ್ಯ ಇಲಾಖೆ ಸಿಬ್ಬಂದಿ ಕೈಯಲ್ಲಿಯದ್ದ ಲಾಠಿ ಕಂಡು ಪುನಃ ಕೆರೆ ದಂಡೆ ಮೇಲಿನ ಪೊದೆಯಲ್ಲಿ ಅವಿತು ಕೂತಿತ್ತು. ಸಂಜೆ ಕಾರ್ಯಾಚರಣೆ ನಡೆಸಿ ಸಮೀಪದ ಗೊಬ್ಬರದ ಹೊಂಡ ಅರಣ್ಯ ಪ್ರದೇಶಕ್ಕೆ ಕರಡಿಯನ್ನು ಅಟ್ಟಲಾಗಿದೆ.
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






