SHIVAMOGGA LIVE NEWS | 25 MAY 2024
SHIKARIPURA : ಈಸೂರು ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಕರಡಿಯನ್ನು (BEAR) ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸಂಜೆ ಕಾರ್ಯಾಚರಣೆ ನಡೆಸಿ ಕರಡಿಯನ್ನು ಕಾಡಿಗಟ್ಟಲಾಗಿದೆ.
![]() |
ಈಸೂರು ಗ್ರಾಮದಲ್ಲಿ ಗುರುವಾರ ಕರಡಿ ಪ್ರತ್ಯಕ್ಷವಾಗಿತ್ತು. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೆ ಮೊಕ್ಕಾಂ ಹೂಡಿ ಕರಡಿ ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದರು. ಶುಕ್ರವಾರ ಸಂಜೆ ಗ್ರಾಮದ ವೀರಭದ್ರೇಶ್ವರ ಸ್ವಾಮಿ ದೇಗುಲದ ಹಿಂಭಾಗ ಕೆರೆಯಲ್ಲಿ ಕರಡಿ ಕಾಣಿಸಿಕೊಂಡಿತ್ತು. ಕೆರೆ ಸುತ್ತಲು ಬಲೆ ಹಾಕಿ, ಕರಡಿ ಕಾಡಿಗಟ್ಟುವ ಪ್ರಯತ್ನ ನಡೆಸಲಾಯಿತು.
ಇದನ್ನೂ ಓದಿ – ಇನ್ನು 3 ಗಂಟೆ ಶಿವಮೊಗ್ಗ ಸೇರಿ ವಿವಿಧೆಡೆ ಅಲರ್ಟ್, ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್
ಕಾರ್ಯಾಚರಣೆ ಸಂದರ್ಭ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ಕರಡಿ ದಾಳಿಗೆ ಮುಂದಾಯಿತು. ಜನರ ಕೂಗಾಟ, ಅರಣ್ಯ ಇಲಾಖೆ ಸಿಬ್ಬಂದಿ ಕೈಯಲ್ಲಿಯದ್ದ ಲಾಠಿ ಕಂಡು ಪುನಃ ಕೆರೆ ದಂಡೆ ಮೇಲಿನ ಪೊದೆಯಲ್ಲಿ ಅವಿತು ಕೂತಿತ್ತು. ಸಂಜೆ ಕಾರ್ಯಾಚರಣೆ ನಡೆಸಿ ಸಮೀಪದ ಗೊಬ್ಬರದ ಹೊಂಡ ಅರಣ್ಯ ಪ್ರದೇಶಕ್ಕೆ ಕರಡಿಯನ್ನು ಅಟ್ಟಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200