ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್ಗೆ (Bus) ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಪಟ್ಟಣದ ದೊಡ್ಡಕೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದ ವೇಳೆ ಓಡಿಬಂದ ಹೋರಿಯೊಂದು ಚಲಿಸುತ್ತಿದ್ದ ಬಸ್ಗೆ ಗುದ್ದಿ ಸ್ಥಳದಲ್ಲೇ ಮೃತಪಟ್ಟಿದೆ. ಪಟ್ಟಣದ ವಿನಾಯಕ ನಗರದ ಹೋರಿಯೊಂದು ಅಖಾಡದಿಂದ ತಪ್ಪಿಸಿಕೊಂಡು ಬರುವಾಗ ಶಿವಮೊಗ್ಗ ರಸ್ತೆಯ ಕಾಮಧೇನು ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಗೆ ಡಿಕ್ಕಿ ಹೊಡೆಯಿತು. ಹೋರಿಯನ್ನು ಕ್ರೇನ್ ಮೂಲಕ ಸಾಗಿಸಲಾಯಿತು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ರಣಜಿ, ಮಯಾಂಕ್ ಅಗರ್ವಾಲ್ ಔಟ್, ಗೋವಾ ತಂಡಕ್ಕೆ ಅರ್ಜುನ್ ತೆಂಡುಲ್ಕರ್ ಬಲ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
