SHIVAMOGGA LIVE NEWS | 20 JUNE 2024
SHIKARIPURA : ಸರ್ಕಾರಿ ಆಸ್ಪತ್ರೆಗೆ (Hospital) ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ಸೊರಬ, ಹಿರೇಕೆರೂರು, ಹೊನ್ನಾಳಿ, ನ್ಯಾಮತಿ ಸೇರಿ ವಿವಿಧ ತಾಲೂಕುಗಳಿಂದ ರೋಗಿಗಳು ಬರುತ್ತಾರೆ. ಇಲ್ಲಿ ಉತ್ತಮ ವೈದ್ಯರಿದ್ದಾರೆ. ಆದರೆ ಅದಕ್ಕೆ ಪೂರಕ ವಾತಾವರಣ ನಿರ್ಮಾಣವಾಗಬೇಕು. ವೈದ್ಯರು ಸೂಕ್ತವಾಗಿ ಸ್ಪಂದಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ಕೊರತೆ ಇಲ್ಲ. ಎಕ್ಸ್-ರೇ, ಸ್ಕ್ಯಾನಿಂಗ್ ಸೇರಿ ಚಿಕಿತ್ಸೆಗೆ ಪೂರಕವಾದ ಯಾವುದೇ ಉಪಕರಣಗಳು ಹಾಳಾಗಿದ್ದರೆ ತಕ್ಷಣ ದುರಸ್ಥಿ ಮಾಡಿಸಿಕೊಳ್ಳಿ. ರೋಗಿಯನ್ನು ತಕ್ಷಣ ಶಿವಮೊಗ್ಗಕ್ಕೆ ಶಿಫಾರಸು ಮಾಡುವುದಕ್ಕಿಂತ ಮೊದಲು ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿ. ಏನಾದರೂ ಕೊರತೆಗಳಾದರೆ ನನ್ನ ಗಮನಕ್ಕೆ ತನ್ನಿ. ನಾನು ಆರೋಗ್ಯ ಸಚಿವರೊಂದಿಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ಡೆಂಗ್ಯು ಜ್ವರ ಪ್ರಕರಣ ಹೆಚ್ಚಾಗುತ್ತಿವೆ. ಸಾರ್ವಜನಿಕರು ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಮಳೆಗಾಲದ ಆರಂಭದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಶುದ್ಧ ಕುಡಿಯುವ ನೀರು ಮತ್ತು ಸ್ವಚ್ಛ ಪರಿಸರದ ಅಗತ್ಯವಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಸ್ವಚ್ಛತೆ ಮತ್ತು ಮಾರಕ ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಟಿಎಚ್ಒ ಡಾ. ನವೀದ್ ಖಾನ್, ಡಾ. ಅರುಣ್ ಕುಮಾರ್, ಡಾ. ಶ್ರೀನಿವಾಸ್, ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ಹನುಮಂತಪ್ಪ, ಯುವ ಮೋರ್ಚಾ ಅಧ್ಯಕ್ಷ ವೀರನ ಗೌಡ ಸೇರಿ ಹಲವರು ಇದ್ದರು.
ಇದನ್ನೂ ಓದಿ – ಶಿವಮೊಗ್ಗದ ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಪರಿಶೀಲನೆ, ಏನೆಲ್ಲ ಸೂಚನೆ ನೀಡಿದ್ರು ಸಂಸದ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200