SHIVAMOGGA LIVE NEWS | 10 JULY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIKARIPURA : ಡೆಂಗ್ಯು ಉಲ್ಬಣವಾಗಿರುವ ಹಿನ್ನೆಲೆ ಶಾಸಕ ಬಿ.ವೈ. ವಿಜಯೇಂದ್ರ ಅವರು ಶಿರಾಳಕೊಪ್ಪದ ಪಟ್ಟಣ ಸಮುದಾಯ ಆರೊಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ವಿವಿಧ ವಿಭಾಗಗಳಿಗೆ ತೆರಳಿ ವೀಕ್ಷಿಸಿದರು. ರೋಗಿಗಳು, ಸಂಬಂಧಿಕರ ಜೊತೆಗೆ ಮಾತನಡಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಉತ್ತಮ ಸೇವೆ ನೀಡಬೇಕು
ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹಲವು ಯೋಜನೆ ನೀಡುತ್ತಿದೆ. ವೈದ್ಯರು ರೋಗಿಗಳಿಗೆ ಉತ್ತಮ ಸೇವೆ ನೀಡಬೇಕು. ಆರೋಗ್ಯ ಸಿಬ್ಬಂದಿ ಜನರ ಬಗ್ಗೆ ಕಾಳಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯೇಂದ್ರ ತಿಳಿಸಿದರು. ಆಸ್ಪತ್ರೆಯಲ್ಲಿ ದಾಖಲಾದ ಒಳರೋಗಿಗಳನ್ನು ಮಾತನಾಡಿಸಿ, ಆಸ್ಪತ್ರೆಯಲ್ಲಿ ದೊರೆಯುತ್ತಿರುವ ಸೇವೆ ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

50 ಹಾಸಿಗೆ ಆಸ್ಪತ್ರೆ ಕಾಮಗಾರಿ ಪರಿಶೀಲನೆ
ನಿರ್ಮಾಣ ಹಂತದಲ್ಲಿರುವ 50 ಹಾಸಿಗೆಯ ಆಸ್ಪತ್ರೆಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿದರು. ಆಸ್ಪತ್ರೆಗೆ ಅಗತ್ಯವಿರುವ ಸೌಕರ್ಯಗಳ ಪಟ್ಟಿ ಹಾಗೂ ಅವಶ್ಯಕತೆ ಇರುವ ಸಿಬ್ಬಂದಿ ಪಟ್ಟಿಯನ್ನು ನೀಡಿದರೆ ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ವೈದ್ಯಾಧಿಕಾರಿಗಳಿಗೆ ತಿಳಿಸಿದರು.
ವೈದ್ಯಾಧಿಕಾರಿ ಡಾ. ಮಹಾಲಿಂಗ ಕೊಲ್ಲೆ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವಿರೇಂದ್ರ ಪಾಟೀಲ್, ಟೌನ್ ಅಧ್ಯಕ್ಷ ಚೆನ್ನವೀರ ಶೆಟ್ಟಿ ಇದ್ದರು.
ಇದನ್ನೂ ಓದಿ – ಡೆಂಗ್ಯು ಶಂಕೆ, ಜ್ವರದಿಂದ ಬಳಲುತ್ತಿದ್ದ ರಿಪ್ಪನ್ಪೇಟೆಯ ಮಹಿಳೆ, ಶಿರಾಳಕೊಪ್ಪದ 9 ತಿಂಗಳ ಮಗು ಸಾವು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





