ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MARCH 2023

SHIKARIPURA : ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೂರಿದ್ದಾರೆ. ಮನೆಯ ಕಿಟಕಿ ಗಾಜು ಒಡೆದು ಪುಡಿ ಮಾಡಿದರು. ಇಡೀ ದಿನ ಶಿಕಾರಿಪುರ ಪಟ್ಟಣದಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಮಾಹಿತಿ.

Stone-Pelting-on-Yedyurappa-House-in-Shikaripura

ಸಾವಿರ ಸಾವಿರ ಸಂಖ್ಯೆಯ ಜನ

ನ್ಯಾ. ಸದಾಶಿವ ಆಯೋಗದ ರಿಪೋರ್ಟ್, ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರ ವಿರೋಧಿಸಿ ಬಂಜಾರ ಸಮುದಾಯದ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಕೊರಚ, ಕೊರಮ, ಭೋವಿ ಸಮುದಾಯದ ಜನರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Stone pelting on yedyurappa house

ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಲಾಯಿತು. ಈ ವೇಳೆ ಮರಿಯಮ್ಮದೇವಿ ಮಠದ ಪೀಠಾಧ್ಯಕ್ಷ ಶ್ರೀ ಸೈನಾಭಗತ್ ಸ್ವಾಮೀಜಿ ಅವರು ಡಾ. ಅಂಬೇಡರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಕ ಸಾವಿರಾರು ಜನರು ರಸ್ತೆ ತಡೆ ನಡೆಸಿದರು. ಅಲ್ಲಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿವರೆಗೆ ಸಾಗಿದರು.

Shikaripura Attack on yedyurappa house

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಗಳನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದರು. ಕೆಲವರು ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಸಂದರ್ಭ ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ನಡು ರಸ್ತೆಯಲ್ಲಿ ಇರಿಸಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

Shikaripura Attack on yedyurappa house

ಪ್ರತಿಭಟನಾಕಾರರು ತಾಲೂಕು ಕಚೇರಿ ಬಳಿ ಮನವಿ ಸಲ್ಲಿಸಲು ಆಗಮಿಸಿದ್ದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆ ಕಡೆಗೆ ಪ್ರತಿಭಟನಾಕಾರರು ತೆರಳದಂತೆ ತಡೆಯಲು ಬ್ಯಾರಿಕೇಡ್ ಹಾಕಲಾಗಿತ್ತು. ಕೆಲವರು ಏಕಾಏಕಿ ಬ್ಯಾರಿಕೇಡ್ ಗಳನ್ನು ತಳ್ಳಿಕೊಂಡು ಯಡಿಯೂರಪ್ಪ ಅವರ ಮನೆ ಕಡೆಗೆ ನುಗ್ಗಿದರು. ದೊಡ್ಡ ಸಂಖ್ಯೆಯ ಜನರು ಅವರನ್ನು ಹಿಂಬಾಲಿಸಿದರು.

ತಹಶೀಲ್ದಾರ್ ಅವರಿಗೆ ಮನವಿ ಕೊಡಲು ಬಂದಿದ್ದೆವು. ಹೋರಾಟಗಾರರು ಬಂದಾಗ ಎರಡು ಗೇಟ್ ಬಂದ್ ಮಾಡಿ, ಮನವಿ ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಮನವಿ ಸಲ್ಲಿಸಲು ಬಂದಿದ್ದ ಶ್ರೀ ಸೈನಾಭಗತ್ ಸ್ವಾಮೀಜಿ ಅವರಿಗೆ ಅವಮಾನವಾಯಿತು. ನಾವೆಲ್ಲ ಸ್ಥಳೀಯ ಶಾಸಕ ಯಡಿಯೂರಪ್ಪ (Yedyurappa), ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಗೆ ಹೋಗಿ ಮುತ್ತಿಗೆ ಹಾಕಲು ಮುಂದಾದೆವು. ಆಗ ಪೊಲೀಸರು ಲಾಠಿ ಪ್ರಹಾರ ಮಾಡಿದರು. ಸಮುದಾಯದ ಹೆಣ್ಮಕ್ಕಳಿಗೆ ಗಾಯಗಳಾಗಿವೆ. ಹಾಗಾಗಿ ಪರಿಸ್ಥಿತಿ ಬೇರೆ ಸ್ವರೂಪ ಪಡೆಯಿತು. ನಾವ್ಯಾರೂ ಇಲ್ಲಿ ಗಲಾಟೆ ಮಾಡಲು ಬಂದಿರಲಿಲ್ಲ.ಗಿರೀಶ್, ಬಂಜಾರ ಸಮುದಾಯದ ಮುಖಂಡ

ಬ್ಯಾರಿಕೇಡ್ ತಳ್ಳಿ ಯಡಿಯೂರಪ್ಪ ಅವರ ಮನೆ ಕಡೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇದರಿಂದ ಚದುರಿದ ಪ್ರತಿಭಟನಾಕಾರರು ಬಳಿಕ ಪೊಲೀಸರ ಮೇಲೆ ಕಲ್ಲು, ಚಪ್ಪಲಿ ತೂರಾಟ ಮಾಡಿದರು.

Shikaripura Attack on yedyurappa house

ಘಟನೆಯಲ್ಲಿ ಶಿಕಾರಿಪುರ ಠಾಣೆ ಇನ್ಸ್ ಪೆಕ್ಟರ್ ಲಕ್ಷ್ಮಣ್, ಸಿಬ್ಬಂದಿ, ಕೆ.ಎಸ್.ಆರ್.ಪಿ ಸಿಬ್ಬಂದಿ ಗಾಯಗೊಂಡರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು.

Shikaripura Attack on yedyurappa house

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆ ಮುಂದೆ ಪ್ರತಿಭಟನಾಕಾರರು ಜಮಾಯಿಸಿದರು. ಅವರ ಮನೆಯತ್ತ ಕಲ್ಲು, ಚಪ್ಪಲಿ ತೂರಾಟ ಮಾಡಿದರು. ಮನೆಯ ಕಿಟಕಿ ಗಾಜುಗಳು ಪುಡಿಯಾದವು. ಯಡಿಯೂರಪ್ಪ ಅವರ ಮನೆ ಇರುವ ರಸ್ತೆಯಲ್ಲಿ ಕೆಲಕಾಲ ಆತಂಕ ಉಂಟಾಯಿತು. ಬಿಜೆಪಿ ಕಚೇರಿ ಮೇಲೆ ಹಾರಿಸಿದ್ದ ಬಿಜೆಪಿ ಧ್ವಜನ್ನು ಕೆಲವರು ಕಿತ್ತೆಸೆದರು.

Shikaripura Attack on yedyurappa house

ಯಡಿಯೂರಪ್ಪ ಅವರ ಮನೆ ಬಳಿ ನುಕುನುಗ್ಗಲು ಉಂಟಾಗಿ, ಮಹಿಳೆಯೊಬ್ಬರು ನೆಲಕ್ಕುರುಳಿದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇನ್ನು, ಇದೇ ವೇಳೆ ಹಲವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಯಡಿಯೂರಪ್ಪ ಮನೆ ಮೇಲೆ ದಾಳಿ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Shikaripura Attack on yedyurappa house

ಪ್ರತಿಭಟನಾಕಾರರನ್ನು ಪೊಲೀಸರು ತಹಶೀಲ್ದಾರ್ ಕಚೇರಿಗೆ ಕರೆದೊಯ್ದರು. ತಹಶೀಲ್ದಾರ್ ವಿಶ್ವನಾಥ್ ಅವರಿಗೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಿದರು. ಅಲ್ಲದೆ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಸಭೆ ನಡೆಸಲಾಯಿತು.

ಇದನ್ನೂ ಓದಿ – ಮನೆ ಮೇಲೆ ಕಲ್ಲು ತೂರಾಟ, ಮಾಜಿ ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ, ಹೇಳಿಕೆಯ 5 ಪಾಯಿಂಟ್ ಇಲ್ಲಿದೆ

Shikaripura Attack on yedyurappa house

ಇನ್ನು, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು. ದಾಳಿ ಕುರಿತು ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಶಿಕಾರಿಪುರದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಸೆಕ್ಷನ್ 144 ಜಾರಿ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು?

Ayanuru Manjunatha

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 28, 2023

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment