
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಆಗಸ್ಟ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿಕಾರಿಪುರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಇವತ್ತು ಭೇಟಿ ನೀಡಿದ್ದರು. ಈ ವೇಳೆ ಸೋಂಕಿತರೊಬ್ಬರು ಜಿಲ್ಲಾಧಿಕಾರಿ ಮುಂದೆ ವಿಶೇಷ ಬೇಡಿಕೆ ಮುಂದಿಟ್ಟು ಎಲ್ಲರು ನಗುವಂತೆ ಮಾಡಿದ್ದಾರೆ.
ಅಂಬಾರಗೊಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇವತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಭೇಟಿ ನೀಡಿದ್ದರು.
ವ್ಯವಸ್ಥೆ ಪರಿಶೀಲನೆ, ಸೋಂಕಿತರ ಜತೆ ಚರ್ಚೆ
ಕೋವಿಡ್ ಕೇರ್ ಸೆಂಟರ್ನ ವ್ಯವಸ್ಥೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ಶಿಕಾರಿಪುರ ತಹಶೀಲ್ದಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಜೊತೆಗೆ ಚರ್ಚೆ ನಡೆಸಿದರು. ಬಳಿಕ ಕ್ವಾರಂಟೈನ್ನಲ್ಲಿ ಇರುವ ಸೋಂಕಿತರೊಂದಿಗೆ ಚರ್ಚಿಸಿದರು. ಸೌಲಭ್ಯಗಳ ಕುರಿತು ವಿಚಾರಿಸಿದರು.
ವಿಶೇಷ ಬೇಡಿಕೆ ಮುಂದಿಟ್ಟ ಸೋಂಕಿತ
ಸೌಲಭ್ಯ, ಚಿಕಿತ್ಸೆ ಕುರಿತು ಸೋಂಕಿತರಿಗೆ ಜಿಲ್ಲಾಧಿಕಾರಿ ವಿಚಾರಿಸುತ್ತಿದ್ದಾಗ ವ್ಯಕ್ತಿಯೊಬ್ಬರು ವಿಶೇಷ ಬೇಡಿಕೆಯಿಟ್ಟರು. ಅಧಿಕಾರಿಗಳೆಲ್ಲರು ನಗುವಂತಾಯಿತು. ಜಿಲ್ಲಾಧಿಕಾರಿ ಅವರು ಮರು ಉತ್ತರ ನೀಡಲಾಗದೆ ವಿಷಯ ಬದಲಾಯಿಸುವಂತಾಯಿತು. ಸೋಂಕಿತ ವ್ಯಕ್ತಿಯೊಬ್ಬರಿಗೆ ಮದುವೆಯಾಗಿದೆಯಾ ಎಂದು ಜಿಲಾಧಿಕಾರಿ ಪ್ರಶ್ನಿಸಿದರು. ಅದಕ್ಕೆ ಅವರು ನನ್ನ ಹೆಂಡತಿ ಇವತ್ತು ಬಂದರಷ್ಟೇ ಮನೆಗೆ ಸೇರಿಸುತ್ತೇನೆ ಅಂತಿದ್ದಾಳೆ ಎಂದು ಹೇಳಿ ತನ್ನನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.
ಡಿಸಿ ಭೇಟಿ, ವಿಶೇಷ ಮನವಿಯ ವಿಡಿಯೊ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/249936925969902/?t=2
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






