| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
![]()
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಆಗಸ್ಟ್ 2020
ಶಿಕಾರಿಪುರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ಗೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಇವತ್ತು ಭೇಟಿ ನೀಡಿದ್ದರು. ಈ ವೇಳೆ ಸೋಂಕಿತರೊಬ್ಬರು ಜಿಲ್ಲಾಧಿಕಾರಿ ಮುಂದೆ ವಿಶೇಷ ಬೇಡಿಕೆ ಮುಂದಿಟ್ಟು ಎಲ್ಲರು ನಗುವಂತೆ ಮಾಡಿದ್ದಾರೆ.
ಅಂಬಾರಗೊಪ್ಪ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇವತ್ತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಭೇಟಿ ನೀಡಿದ್ದರು.
ವ್ಯವಸ್ಥೆ ಪರಿಶೀಲನೆ, ಸೋಂಕಿತರ ಜತೆ ಚರ್ಚೆ
ಕೋವಿಡ್ ಕೇರ್ ಸೆಂಟರ್ನ ವ್ಯವಸ್ಥೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ಶಿಕಾರಿಪುರ ತಹಶೀಲ್ದಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಜೊತೆಗೆ ಚರ್ಚೆ ನಡೆಸಿದರು. ಬಳಿಕ ಕ್ವಾರಂಟೈನ್ನಲ್ಲಿ ಇರುವ ಸೋಂಕಿತರೊಂದಿಗೆ ಚರ್ಚಿಸಿದರು. ಸೌಲಭ್ಯಗಳ ಕುರಿತು ವಿಚಾರಿಸಿದರು.
ವಿಶೇಷ ಬೇಡಿಕೆ ಮುಂದಿಟ್ಟ ಸೋಂಕಿತ
ಸೌಲಭ್ಯ, ಚಿಕಿತ್ಸೆ ಕುರಿತು ಸೋಂಕಿತರಿಗೆ ಜಿಲ್ಲಾಧಿಕಾರಿ ವಿಚಾರಿಸುತ್ತಿದ್ದಾಗ ವ್ಯಕ್ತಿಯೊಬ್ಬರು ವಿಶೇಷ ಬೇಡಿಕೆಯಿಟ್ಟರು. ಅಧಿಕಾರಿಗಳೆಲ್ಲರು ನಗುವಂತಾಯಿತು. ಜಿಲ್ಲಾಧಿಕಾರಿ ಅವರು ಮರು ಉತ್ತರ ನೀಡಲಾಗದೆ ವಿಷಯ ಬದಲಾಯಿಸುವಂತಾಯಿತು. ಸೋಂಕಿತ ವ್ಯಕ್ತಿಯೊಬ್ಬರಿಗೆ ಮದುವೆಯಾಗಿದೆಯಾ ಎಂದು ಜಿಲಾಧಿಕಾರಿ ಪ್ರಶ್ನಿಸಿದರು. ಅದಕ್ಕೆ ಅವರು ನನ್ನ ಹೆಂಡತಿ ಇವತ್ತು ಬಂದರಷ್ಟೇ ಮನೆಗೆ ಸೇರಿಸುತ್ತೇನೆ ಅಂತಿದ್ದಾಳೆ ಎಂದು ಹೇಳಿ ತನ್ನನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.
ಡಿಸಿ ಭೇಟಿ, ವಿಶೇಷ ಮನವಿಯ ವಿಡಿಯೊ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/249936925969902/?t=2
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()