ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 ಜುಲೈ 2021
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿಕಾರಿಪುರದ ಬೇಗೂರು ಮರಡಿ ತಾಂಡಾದಲ್ಲಿ ಲಂಬಾಣಿ ಸಮುದಾಯದವರ ಜೊಎಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು.
ಡಿಕೆಶಿ ಏನೇನು ಹೇಳಿದರು?
ಅರಣ್ಯ ಹಕ್ಕು ಕಾಯಿದೆಗೆ ತಿದ್ದುಪಡಿ ತರುವುದಕ್ಕೆ ಕಂದಾಯ ಭೂಮಿ ಅರಣ್ಯ ಇಲಾಖೆಗೆ ಇಂಡೀಕರಣ ಮಾಡಿರುವುದರ ವಿರುದ್ಧ ಕೇಂದ್ರ, ರಾಜ್ಯದಲ್ಲಿ ಹೋರಾಟ ಮಾಡಿ ರೈತರಿಗೆ ಅನುಕೂಲ ಕಲ್ಪಿಸುವುದಕ್ಕೆ ಕಾಂಗ್ರೆಸ್ ಕ್ರಮ ಕೈಗೊಳ್ಳುತ್ತದೆ.
ಸಹೋದರ ಮೂಲಕ ಸಂಸತ್ನಲ್ಲಿ ಧ್ವನಿ
ಅರಣ್ಯ ಹಕ್ಕು ಕಾಯಿದೆಯಲ್ಲಿ ಮೂರು ತಲೆಮಾರಿನ ದಾಖಲೆ ನೀಡಬೇಕು ಎನ್ನುವ ಕಾರಣಕ್ಕೆ ದೊಡ್ಡ ಪ್ರಮಾಣದ ಬಡವರಿಗೆ ಭೂಮಿ ಹಕ್ಕು ಸಿಗಲು ಸಾಧ್ಯವಾಗಿಲ್ಲ. ಅದು ಕಡಿಮೆ ಮಾಡುವುದಕ್ಕೆ ಸಹೋದರ ಸುರೇಶ್ ಮೂಲಕ ಸಂಸತ್ನಲ್ಲಿ ಧ್ವನಿಯೆತ್ತುವುದಲ್ಲದೆ ಪಕ್ಷದ ಮೂಲಕವೂ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು.
ರಾಜ್ಯದಲ್ಲೂ ಹೋರಾಟದ ಭರವಸೆ
ಕಂದಾಯ ಭೂಮಿ ಇಂಡೀಕರಣ ಮೂಲಕ ಅರಣ್ಯ ಇಲಾಖೆಗೆ ಹೋಗಿರುವುದು ಸರಿಯಲ್ಲ. ಈ ಎರಡು ಕಾರಣಕ್ಕೆ ವಸತಿ ಪ್ರದೇಶದಲ್ಲಿನ ಜನರಿಗೆ ಮನೆಗೆ ಹಕ್ಕುಪತ್ರ, ಉಳುಮೆ ಮಾಡಿರುವ ರೈತರಿಗೆ ಜಮೀನಿನ ಹಕ್ಕುಪತ್ರ ಸಿಗುತ್ತಿಲ್ಲ. ಬಹುತೇಕ ತಾಂಡ ವಸತಿಪ್ರದೇಶ ಅರಣ್ಯ ಭೂಮಿಯಲ್ಲಿದ್ದು ಅವುಗಳ ಸಕ್ರಮಗೊಳಿಸಿ ಕಂದಾಯ ಗ್ರಾಮ ಮಾಡುವುದಕ್ಕೆ ಕಾಯಿದೆಯಲ್ಲಿ ತಿದ್ದುಪಡಿ ತರುವುದಕ್ಕೆ ರಾಜ್ಯದಲ್ಲೂ ಹೋರಾಟ ಮಾಡ ಲಾಗುವುದು. ಈಗಿನ ಸಮಸ್ಯೆಗೆ ಯಾವುದೆ ಪಕ್ಷ ಕಾರಣವಾಗಿದೆ ಎಂದು ದೂರುವ ಬದಲಿಗೆ ಸಮಸ್ಯೆ ಪರಿಹಾರ ಆಗಬೇಕು ಅದಕ್ಕಾಗಿ ಕೆಲಸ ಮಾಡುತ್ತೇನೆ. ಸಮಸ್ಯೆ ಪರಿಹಾರಕ್ಕೆ ನಮ್ಮ ಪಕ್ಷದೊಳಗಿನ ಅನುಭವಿ ನಾಯಕರ ಜತೆ ಚರ್ಚಿಸುತ್ತೇನೆ ಎಂದರು.

ಲಂಬಾಣಿ ಜನರೊಂದಿಗೆ ಬೆಳೆದೆ
ಸಣ್ಣ ವಯಸ್ಸಿನಲ್ಲಿ ಲಂಬಾಣಿ ಜನರೊಂದಿಗೆ ಬೆಳೆದವನು ನಾನು. ಅವರ ಕಷ್ಟಕ್ಕೆ ಧ್ವನಿಯಾಗಬೇಕು ಅವರ ಸಮಸ್ಯೆ ಹತ್ತಿರದಿಂದ ಅರಿಯಬೇಕು ಎನ್ನುವ ಕಾರಣಕ್ಕೆ ಪ್ರವಾಸ ಮಾಡುತ್ತಿದ್ದೇನೆ. ಸಭೆಯಲ್ಲಿ ನಮ್ಮ ಪಕ್ಷದ ರಾಜಕೀಯ ಪಕ್ಷದ ಧ್ವಜ ಹಾಕಿಲ್ಲ. ಯಾವುದೆ ಮುಖಂಡರನ್ನ ಕೂರಿಸಿಲ್ಲ. ಸಮಸ್ಯೆ ವೇದಿಕೆಯಲ್ಲಿ ಹೇಳುವವರೂ ಯಾವುದೆ ವ್ಯಕ್ತಿ, ಸರಕಾರ ದೂಷಿಸುವುದಕ್ಕೆ ಅವಕಾಶ ನೀಡದೆ ಸಮಸ್ಯೆ ಹೇಳಿಕೊಳ್ಳಬಹುದು. ಅವರಿಗೆ ತಿಳಿದ ಪರಿಹಾರ ಸಲಹೆ ನೀಡಲು ಸೂಚಿಸಲಾಗಿದೆ.
ಲಂಬಾಣಿ ಸಮುದಾಯದ ಜನರ ಕಷ್ಟ, ನಷ್ಟದ ಕುರಿತು ಹಲವರು ಸಂವಾದದಲ್ಲಿ ತಿಳಿಸಿದರು. ಹೊಸೂರು ಚಂದ್ರು, ತರಲಘಟ್ಟ ಮಂಜುನಾಯ್ಕ, ಕುಮಾರನಾಯ್ಕ, ರಾಘು ಬೇಗೂರು, ಹೇಮಾನಾಯ್ಕ, ಉಮೇಶ್ ಮಾರವಳ್ಳಿ, ನಾಗಿಬಾಯಿ ಮತ್ತಿತರರು ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಂವಾದದಲ್ಲಿ ಭಾವಹಿಸಿದರು.
ಗ್ರಾಮಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಆರತಿ ಬೆಳಗಿ, ಲಂಬಾಣಿ ನೃತ್ಯದ ಮೂಲಕ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.
ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಕಾಂಗ್ರೆಸ್ ಮುಖಂಡರಾದ ರುದ್ರಪ್ಪ ಲಮಾಣಿ, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ತೀ.ನಾ. ಶ್ರೀನಿವಾಸ್, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪ್ರಕಾಶ್ ರಾಥೋಡ್, ಮಂಜುನಾಥ ಭಂಡಾರಿ, ಶಾಂತವೀರಪ್ಪಗೌಡ, ಗೋಣಿ ಮಾಲತೇಶ್, ನರಸಿಂಗನಾಯ್ಕ, ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ನಾಗರಾಜಗೌಡ ಮತ್ತಿತರರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















