SHIVAMOGGA LIVE NEWS | 1 MAY 2024
ELECTION NEWS : ಅನುಮತಿ ಇದ್ದರೂ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ನಡೆಸಲು ಅಡ್ಡಿ ಉಂಟು ಮಾಡಲಾಗಿದೆ. ಏಕಾಏಕಿ ವೇದಿಕೆ ತೆರವು ಮಾಡಲಾಗಿದೆ. ಇದರಿಂದ ಕೆಂಡಾಮಂಡಲರಾದ ಈಶ್ವರಪ್ಪ, ನಡು ರಸ್ತೆಯಲ್ಲೇ ನಿಂತು ಆಕ್ರೋಶ ವ್ಯಕ್ತಪಡಿಸಿದರು.
![]() |
ಶಿರಾಳಕೊಪ್ಪದ ಸೊರಬ ರಸ್ತೆಯ ಮೈಲಾರ ಲಿಂಗೇಶ್ವರ ದೇವಸ್ಥಾನದ ಬಳಿ ಇವತ್ತು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಸಭೆ ಆಯೋಜಿಸಲಾಗಿತ್ತು. ಚುನಾವಣ ಆಯೋಗದಿಂದ ಅನುಮತಿಯನ್ನು ಪಡೆಯಲಾಗಿತ್ತು. ಆದರೂ ಕೆಲವರು ವೇದಿಕೆ ಮತ್ತು ಮೈಕ್ಗಳನ್ನು ಒತ್ತಾಯಪೂರ್ವಕವಾಗಿ ತೆರವು ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈಶ್ವರಪ್ಪ ಅವರು ಸಭೆ ನಿಗದಿಯಾಗಿದ್ದ ಸ್ಥಳಕ್ಕೆ ಬಂದಾಗ ವಿಷಯ ತಿಳಿದು ಕೆಂಡಾಮಂಡಲವಾದರು.
ನಡುರಸ್ತೆಯಲ್ಲೇ ನಿಂತು ಭಾಷಣ, ಆಕ್ರೋಶ
ವೇದಿಕೆ ಇರದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಡು ರಸ್ತೆಯಲ್ಲೆ ತೆರದ ವಾಹನದಲ್ಲಿ ನಿಂತು ಸಭೆ ನಡೆಸಿದರು. ಕಾರ್ಯಕರ್ತರು ಚೇರುಗಳನ್ನು ಎಳೆದು ತಂದು ರಸ್ತೆ, ಪಕ್ಕದ ಖಾಲಿ ಜಾಗದಲ್ಲಿ ಕುಳಿತು ಭಾಷಣ ಕೇಳಿದರು.
ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಮತ್ತು ಯಡಿಯೂರಪ್ಪ ಅವರ ಕಡೆಯವರು ಹೊಂದಾಣಿಕೆ ಮಾಡಿಕೊಂಡು ವೇದಿಕೆ ತೆರವು ಮಾಡಿಸಿರಬಹುದು. ಚುನಾವಣೆಯಲ್ಲಿ ಗೆದ್ದು ಇದೇ ಜಾಗಕ್ಕೆ ಬಂದು ಈಗ ಭಾಷಣ ಕೇಳುತ್ತಿರುವವರನ್ನು ಸನ್ಮಾನಿಸುತ್ತೇನೆ. ಇನ್ನೊಮ್ಮೆ ನನ್ನ ಕಾರ್ಯಕ್ರಮಗಳಿಗೆ ತೊಂದರೆ ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200