ಶಿವಮೊಗ್ಗ ಲೈವ್.ಕಾಂ | 17 ಏಪ್ರಿಲ್ 2019
ಶಿಕಾರಿಪುರದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲೂ ‘ನಿಖಿಲ್ ಎಲ್ಲದ್ದಿಯಪ್ಪ’ ಸೌಂಡ್ ಮಾಡಿದೆ. ಪ್ರಚಾರ ಸಭೆಯ ವೇದಿಕೆಯಲ್ಲೇ, ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯೆ, ನಟಿ ತಾರಾ ಈ ಡೈಲಾಗ್ ಪ್ರಸ್ತಾಪಿಸಿ, ಜೆಡಿಎಸ್ ಮತ್ತು ಅದರ ಅಭ್ಯರ್ಥಿಗಳನ್ನು ವ್ಯಂಗ್ಯ ಮಾಡಿದರು.
ಜಾತ್ರೆಯಲ್ಲಿದ್ದೀನಪ್ಪ ಅನ್ನಬೇಕಾಗುತ್ತೆ?
ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರವಾಗಿ ಶಿಕಾರಿಪುರದಲ್ಲಿ ಇವತ್ತು ಬಿಜೆಪಿ ವತಿಯಿಂದ ಬಹಿರಂಗ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ, ನಿಖಿಲ್ ಎಲ್ಲಿದ್ದಿಯಪ್ಪ ಅನ್ನೋ ಡೈಲಾಗ್ ಪ್ರಸ್ತಾಪಿಸಿದ ಶಾಸಕ ಕೆ.ಎಸ್.ಈಶ್ವರಪ್ಪ, ಚುನಾವಣೆ ಮುಗಿದ ಬಳಿಕ ನಿಖಿಲ್ ಬಿಜೆಪಿಯವರ ಸಂಭ್ರಮದ ಜಾತ್ರೆ ಮಧ್ಯೆ ಇದ್ದೀನಪ್ಪ ಅನ್ನಬೇಕಾಗುತ್ತೆ ಎಂದು ವ್ಯಂಗ್ಯವಾಡಿದರು.

ಚುನಾವಣೆ ಬಳಿ ಫಾರಿನ್’ನಲ್ಲಿದ್ದೀನಪ್ಪ..!
ಶಾಸಕ ಈಶ್ವರಪ್ಪ ಅವರಿಗಿಂತಲೂ ಒಂದು ಹೆಜ್ಜೆ ಮುಂದೆಕ್ಕೆ ಹೋದ ನಟಿ ತಾರಾ, ನಿಖಿಲ್ ಎಲ್ಲಿದ್ದೀಯಪ್ಪ ಡೈಲಾಗ್ ಬಳಸಿಕೊಂಡು, ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ವ್ಯಂಗ್ಯ ಮಾಡಿದರು. ಚುನಾವಣೆ ಬಳಿಕ ಮಧು ಎಲ್ಲಿದ್ದೀಯಪ್ಪ ಅಂತಾ ಕೇಳಿದರೆ, ಅಣ್ಣ ಫಾರಿನ್’ನಲ್ಲಿದ್ದೀನಿ ಅಂತಾ ಹೇಳುವ ಪರಿಸ್ಥಿತಿ ಬರಲಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200