SHIVAMOGGA LIVE NEWS | 7 APRIL 2023
SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ಬೆಳಗಿನ ಜಾವದಿಂದಲೆ ಭಕ್ತ ಸಾಗರ
ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು. ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ ವೇದ ಘೋಷ, ವಾದ್ಯ ನುಡಿಸಲಾಯಿತು.
ರಾಜ್ಯದ ವಿವಿಧೆಡೆಯಿಂದ ಭಕ್ತರು
ಶ್ರೀ ಹುಚ್ಚರಾಯ ಸ್ವಾಮಿಯ ಬ್ರಹ್ಮ ರಥೋತ್ಸವ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ರಥೋತ್ಸವದ ವೇಳೆ ಪೂಜೆ ಸಲ್ಲಿಸಿ, ಸ್ವಾಮಿಗೆ ಹರಕೆ ಹೊತ್ತುಕೊಂಡರು. ರಥ ಬೀದಿಯಲ್ಲಿ ತುಂಬೆಲ್ಲ ಜನರು ನಿಂತು ರಥೋತ್ಸವವನ್ನು ಕಣ್ತುಂಬಿಕೊಂಡರು.
ಯಡಿಯೂರಪ್ಪ ಕುಟುಂಬ ಭಾಗಿ
ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದವರು ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರು ರಥೋತ್ಸವದಲ್ಲಿ ಕುಟುಂಬ ಸಹಿತ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್ ಸೇರಿದಂದ ವಿವಿಧ ರಾಜಕೀಯ ಮುಖಂಡರು ಕುಟುಂಬ ಸಹಿತ ರಥೋತ್ಸವದಲ್ಲಿ ಭಾಗಿಯಾಗಿ, ದೇವರ ಪೂಜೆ ಸಲ್ಲಿಸಿದರು.
ಸ್ವಯಂ ಸೇವೆ, ಬಿಗಿ ಭದ್ರತೆ
ರಥೋತ್ಸವದ ಹಿನ್ನೆಲೆ ನೂರಾರು ಯುವಕರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ದೂರದ ಊರುಗಳಿಂದ ಬಂದಿದ್ದ ಭಕ್ತರಿಗೆ ಜನರು ನೀರು, ತಿಂಡಿ, ತಿನಿಸು ವಿತರಿಸಿದರು. ಇನ್ನು, ರಥೋತ್ಸವ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು. ಇವತ್ತು ರಾತ್ರಿ ಶಿಕಾರಿಪುರದಲ್ಲಿ ತೆಪ್ಪೋತ್ಸವ ನಡೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200