ಶಿರಾಳಕೊಪ್ಪದಲ್ಲಿ ಮೂರು ದಿನ ಕನ್ನಡದಲ್ಲಿ ಕುರಾನ್ ಪ್ರವಚನ, ಭಾಗವಹಿಸಲಿದ್ದಾರೆ ಪ್ರಮುಖ ಸ್ವಾಮೀಜಿಗಳು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಮಾಅತೆ ಇಸ್ಲಾಮೀ ಹಿಂದ್ ಶಿರಾಳಕೊಪ್ಪ ಶಾಖೆ ವತಿಯಿಂದ ಶಿರಾಳಕೊಪ್ಪದ ಬಿ.ಎಂ.ಮಹದೇವಯ್ಯ ಬಯಲು ರಂಗಮಂದಿರದಲ್ಲಿ ಫೆಬ್ರವರಿ 27 ರಿಂದ ಮೂರು ದಿನ  ಪ್ರತಿದಿನ ಸಂಜೆ 7.20 ರಿಂದ 9.30ರವರೆಗೆ ನೆಮ್ಮದಿಯ ಬದುಕಿಗಾಗಿ ಕನ್ನಡದಲ್ಲಿ ಕುರಾನ್ ಪ್ರವಚನ ನಡೆಸಲಾಗುತ್ತದೆ. ಇನ್ನು, ಪೊಲೀಸ್ ಠಾಣೆಯ ಮುಂಭಾಗದ ಖಾಲಿ ಜಾಗದಲ್ಲಿ ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ಮಾನವೀಯ ಮೌಲ್ಯಗಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ಸದಸ್ಯ ಅಬ್ದುಲ್ ವಾಹಿಬ್ ತಿಳಿಸಿದ್ದಾರೆ.

53092793 798023400559082 7600815125653618688 n.jpg? nc cat=105& nc eui2=AeEuDgZxYPshmuSaNmXFl7SErR2f3O0Rnqu3 3IfrTpNl UM1aJUrCsJB8RgxGgTCXDE7wSrKhS jUEqle0LG3lpIByFcXmEaX8OgO4xQLyEbQ& nc oc=AQk9zdA0InoNbbtn3sdmiShjPJPeNnGziH V 8YApGbzsBZaMV 4Z8OxIJhcQS8K0po& nc ht=scontent.fblr3 2

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಬ್ದುಲ್ ವಾಹಿಬ್, ಫೆ.27ರ ಬೆಳಿಗ್ಗೆ 10.30ಕ್ಕೆ ಪಿಎಸ್ಐ ಹೆಚ್.ಸಿ.ವಸಂತ್ ಅವರು ಮಾನವೀಯ ಮೌಲ್ಯಗಳ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಸಂಜೆ ದೇವ ವಿಶ್ವಾಸ ಕುರಿತ ಪ್ರವಚನವನ್ನು ಜಡೇ ಮಠದ ಶ್ರೀ ಡಾ.ಮಹಾಂತ ಸ್ವಾಮೀಜಿ ಉದ್ಘಾಟಿಸಲಿದ್ದು, ಜಮಾಅತೆ ಇಸ್ಲಾಮೀ ಹಿಂದ್ ಕೇಂದ್ರ ಸಲಹಾ ಸಮಿತಿ ಸದಸ್ಯ ಅಕ್ಬರ್ ಆಲಿ ಉಡುಪಿ ಇವರು ಪ್ರವಚನ ನೀಡಲಿದ್ದಾರೆ ಎಂದರು.

ಫೆ.28 ರಂದು ಕೆಡುಕು ಮುಕ್ತ ಸಮಾಜ ಕುರಿತ ಪ್ರವಚನದಲ್ಲಿ ಮುಖ್ಯ ಅತಿಥಿಯಾಗಿ ಶಿಕಾರಿಪುರದ ಶ್ರೀ ಮುರುಘಾರಾಜೇಂದ್ರ ವಿರಕ್ತ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಆಗಮಿಸಲಿದ್ದು, ಮಂಗಳೂರಿನ ಶಾಂತಿ ಪ್ರಕಾಶನದ ಪ್ರಬಂಧಕ ಮುಹಮ್ಮದ್ ಕುಂಞ್ಜ ಪ್ರವಚನ ನೀಡಲಿದ್ದಾರೆ ಎಂದರು.

ಮಾ.1 ರಂದು ಪ್ರವಾದಿ ಮುಹಮ್ಮದ್(ಸ) ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ವಿಷಯ ಕುರಿತು ಪ್ರವಚನ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಾಣೇಹಳ್ಳಿ ಮಠದ ಶ್ರೀ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಉಪನ್ಯಾಸಕ ಬಿ. ಮಂಜುನಾಥ್ ಆಗಮಿಸಲಿದ್ದಾರೆ. ಮುಹಮ್ಮದ್ ಕುಂಞ್ಜ ಪ್ರವಚನ ನೀಡಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಸಲೀಂ ಉಮರಿ, ಜಾಕೀರ್ ಹುಸೇನ್ ಇದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment