SHIVAMOGGA LIVE NEWS | 25 AUGUST 2023
SHIKARIPURA : ಕೆಎಸ್ಆರ್ಟಿಸಿ (KSRTC) ಬಸ್, ಬೈಕ್ ಮಧ್ಯೆ ಅಪಘಾತ (Accident) ಸಂಭವಿಸಿ ಯುವಕ ಮೃತಪಟ್ಟಿದ್ದಾನೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಪಟ್ಟಣದ ಕುಟ್ರಹಳ್ಳಿ ನೂತನ ಕೆಎಸ್ಆರ್ಟಿಸಿ ಡಿಪೋ ಎದುರು ಘಟನೆ ಸಂಭವಿಸಿದೆ.
ಪುನೇದಹಳ್ಳಿಯ ಗಜೇಂದ್ರ ಆಚಾರ್ (23) ಮೃತ ದುರ್ದೈವಿ. ಡಿಪೋ ಒಳಗೆ ಬರುತ್ತಿದ್ದ ಬಸ್ಗೆ ಬೈಕ್ ಡಿಕ್ಕಿಯಾಗಿ ಸವಾರ ಗಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ನಂದನ್ಗೆ ತೀವ್ರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಕಳೆಗಟ್ಟಿದ ವರ ಮಹಾಲಕ್ಷ್ಮಿ ಹಬ್ಬ, ಹೂವು, ಹಣ್ಣು ಖರೀದಿ ಜೋರು, ಎಷ್ಟಿದೆ ಬೆಲೆ?
ಹುಟ್ಟುಹಬ್ಬದ ಮರುದಿನವೆ ಸಾವು
ಗಜೇಂದ್ರ ಆಚಾರ್ ಬುಧವಾರ ತನ್ನ ಹುಟ್ಟುಹಬ್ಬ (birthday) ಆಚರಿಸಿಕೊಂಡಿದ್ದ. ಮರುದಿನವೆ ವಿಧಿ ಆಟಕ್ಕೆ ಬಲಿಯಾಗಿದ್ದಾನೆ. ಈ ಸಾವಿನಿಂದ ಗಜೇಂದ್ರ ಆಚಾರ್ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ಎರಡು ದಿನದ ಹಿಂದೆ ಇದೇ ಜಾಗದಲ್ಲಿ ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. ಈತ ಕೂಡ ಪುನೇದಹಳ್ಳಿಯ ನಿವಾಸಿ.
ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಆರ್.ಎಲ್.ಪಾಟೀಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200