SHIVAMOGGA LIVE NEWS | 25 AUGUST 2023
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIKARIPURA : ಕೆಎಸ್ಆರ್ಟಿಸಿ (KSRTC) ಬಸ್, ಬೈಕ್ ಮಧ್ಯೆ ಅಪಘಾತ (Accident) ಸಂಭವಿಸಿ ಯುವಕ ಮೃತಪಟ್ಟಿದ್ದಾನೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಪಟ್ಟಣದ ಕುಟ್ರಹಳ್ಳಿ ನೂತನ ಕೆಎಸ್ಆರ್ಟಿಸಿ ಡಿಪೋ ಎದುರು ಘಟನೆ ಸಂಭವಿಸಿದೆ.
ಪುನೇದಹಳ್ಳಿಯ ಗಜೇಂದ್ರ ಆಚಾರ್ (23) ಮೃತ ದುರ್ದೈವಿ. ಡಿಪೋ ಒಳಗೆ ಬರುತ್ತಿದ್ದ ಬಸ್ಗೆ ಬೈಕ್ ಡಿಕ್ಕಿಯಾಗಿ ಸವಾರ ಗಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ನಂದನ್ಗೆ ತೀವ್ರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಕಳೆಗಟ್ಟಿದ ವರ ಮಹಾಲಕ್ಷ್ಮಿ ಹಬ್ಬ, ಹೂವು, ಹಣ್ಣು ಖರೀದಿ ಜೋರು, ಎಷ್ಟಿದೆ ಬೆಲೆ?
ಹುಟ್ಟುಹಬ್ಬದ ಮರುದಿನವೆ ಸಾವು
ಗಜೇಂದ್ರ ಆಚಾರ್ ಬುಧವಾರ ತನ್ನ ಹುಟ್ಟುಹಬ್ಬ (birthday) ಆಚರಿಸಿಕೊಂಡಿದ್ದ. ಮರುದಿನವೆ ವಿಧಿ ಆಟಕ್ಕೆ ಬಲಿಯಾಗಿದ್ದಾನೆ. ಈ ಸಾವಿನಿಂದ ಗಜೇಂದ್ರ ಆಚಾರ್ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ಎರಡು ದಿನದ ಹಿಂದೆ ಇದೇ ಜಾಗದಲ್ಲಿ ಬೈಕ್ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. ಈತ ಕೂಡ ಪುನೇದಹಳ್ಳಿಯ ನಿವಾಸಿ.
ಶಿಕಾರಿಪುರ ಠಾಣೆ ಇನ್ಸ್ಪೆಕ್ಟರ್ ಆರ್.ಎಲ್.ಪಾಟೀಲ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






