SHIVAMOGGA LIVE NEWS | 30 NOVEMBER 2023
SHIKARIPURA : ತಾಲ್ಲೂಕಿನ ಜನತೆಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು.
![]() |
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ನಿರ್ವಹಣೆ ಕುರಿತು ನಡೆದ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸಚಿವರು ಹೇಳಿದ್ದೇನು?
ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸುವ ಕಾರ್ಯ ಆಗಿಲ್ಲ ಎಂದು ಸಾರ್ವನಿಕರಿಂದ ದೂರುಗಳು ಬಂದಿವೆ. ಅಧಿಕಾರಿಗಳು ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗಬಾರದು. ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರಿಗೆ ಕೊರತೆ ಆಗಬಾರದು ಎಂದು ಅವರು ತಿಳಿಸಿದರು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದರೂ ಜನರಿಗೆ ಕರೆಂಟ್ ಶಾಕ್ ಪಕ್ಕಾ, ಬೆಂಗಳೂರು ಘಟನೆಯಿಂದ ಎಚ್ಚೆತ್ತುಕೊಳ್ಳುತ್ತ ಆಡಳಿತ?
ಅರಣ್ಯ ಇಲಾಖೆ ಅಧಿಕಾರಿಗಳು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. ಹೊಸದಾಗಿ ಭೂಮಿ ಸಾಗುವಳಿ ಮಾಡಲು ಬಿಡಬೇಡಿ. ಸರ್ಕಾರದ ಯೋಜನೆ ಸಮರ್ಪಕವಾಗಿ ಜನರಿಗೆ ತಲುಪಿಸಬೇಕು ಎಂದು ಅವರು ಸೂಚಿಸಿದರು.
ತಾಲೂಕಿನಲ್ಲಿ ಜನವರಿ ತಿಂಗಳವರೆಗೆ ಕುಡಿಯುವ ನೀರಿಗೆ ಯಾವುದೆ ಸಮಸ್ಯೆ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ಸಾಗರ ಉಪವಿಭಾಗಧಿಕಾರಿ ಪಲ್ಲವಿ ಸಾತೇನಹಳ್ಳಿ, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ವಿಶ್ವನಾಥ್, ಇ.ಒ ಪರಮೇಶ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200