ಶಿಕಾರಿಪುರ : ತೀರ್ಥಹಳ್ಳಿಯ ಮಹಿಷಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಂಧಿಸಲು ತೆರಳಿದ್ದ ಪೊಲೀಸ್ (Police) ಸಿಬ್ಬಂದಿ ಮೇಲೆ ದಾಳಿಗೆ ಯತ್ನಿಸಿದ ಹಿನ್ನೆಲೆ ಪೊಲೀಸರು ಆರೋಪಿಯ ಎಡಗಾಲಿಗೆ ಗುಂಡು ಹೊಡೆದಿದ್ದಾರೆ.
ಶಿಕಾರಿಪುರ ಪಟ್ಟಣದ ಟ್ಯಾಂಕ್ ಬಂಡ್ ಸಮೀಪ ಆರೋಪಿ ಶ್ರೀನಿವಾಸ ಅಲಿಯಾಸ್ ಸೀನಾ (25) ಎಂಬಾತನನ್ನು ಬಂಧಿಸಲು ತೀರ್ಥಹಳ್ಳಿಯ ಮಾಳೂರು ಠಾಣೆ ಪೊಲೀಸರು ತೆರಳಿದ್ದರು. ಈ ಸಂದರ್ಭ ಶ್ರೀನಿವಾಸ, ಪೊಲೀಸ್ ಸಿಬ್ಬಂದಿ ಸಂತೋಷ್ ಅವರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭ ಮಾಳೂರು ಠಾಣೆ ಪಿಎಸ್ಐ ಕುಮಾರ್ ಅವರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.
ಆದರು ಶ್ರೀನಿವಾಸ, ಪೊಲೀಸ್ (Police) ಸಿಬ್ಬಂದಿ ಸಂತೋಷ್ ಮೇಲೆ ಮತ್ತೊಮ್ಮೆ ದಾಳಿಗೆ ಯತ್ನಿಸಿದ್ದಾನೆ. ಈ ಹಿನ್ನೆಲೆ ಆತನ ಎಡಗಾಲಿಗೆ ಪಿಎಸ್ಐ ಕುಮಾರ್ ಅವರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಮಂಜುನಾಥ ಗೌಡ ಅರೆಸ್ಟ್, EDಗೆ 3 ಪ್ರಮುಖ ಸೂಚನೆ ನೀಡಿದ ಕೋರ್ಟ್, ಈತನಕ ಏನೇನೆಲ್ಲ ಆಗಿದೆ? ಇಲ್ಲಿದೆ ಡಿಟೇಲ್ಸ್

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200