ಶಿವಮೊಗ್ಗ ಲೈವ್
ಶಿಕಾರಿಪುರ: ತಾಲ್ಲೂಕಿನ ಮಳವಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಸಾವು ಕಂಡಿದ್ದಾರೆ. ಕಾಲು ಹಾಗೂ ಕೈಗಳನ್ನು ಕಟ್ಟಿ ಹಾಕಿರುವ ರೀತಿಯಲ್ಲಿ ಮೆಕ್ಕೆಜೋಳದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಒಡಕೇಶಪ್ಪ (31) ಎಂದು ಗುರುತಿಸಲಾಗಿದೆ. ಕೈ ಕಟ್ಟಿ ಬಾಯಿಗೆ ವಿಷ ಹಾಕಿ ದುಷ್ಕರ್ಮಿಗಳು ಈ ಕೃತ್ಯ ಎಸಗಿರಬಹುದು ಎಂದು ತೀವ್ರ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಕಾರಿಯಪ್ಪ ಹಾಗೂ ಪಿಎಸ್ಐ ಪ್ರಶಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ, ಪ್ರತಿ ತಿಂಗಳು ₹72,000 ಗೌರವ ಧನ
