SHIVAMOGGA LIVE NEWS | 9 JANUARY 2023
ಶಿಕಾರಿಪುರ : ಸ್ನೇಹಿತರೊಂದಿಗೆ ಅಂಬ್ಲಿಗೊಳ್ಳ ಜಲಾಶಯಕ್ಕೆ (ambligola dam) ತೆರಳಿದ್ದ ವ್ಯಕ್ತಿಯೊಬ್ಬರು ಡ್ಯಾಂನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ನಿವಾಸಿ ಜಗದೀಶ್ (37) ನಾಪತ್ತೆ ಆದವರು. ಜಗದೀಶ್ ಅವರು ತಮ್ಮ ಸ್ನೇಹಿತರೊಂದಿಗೆ ಭಾನುವಾರ ಸಂಜೆ ಅಂಬ್ಲಿಗೊಳ್ಳ ಜಲಾಶಯಕ್ಕೆ ಬಂದಿದ್ದರು. ತಂಡದಲ್ಲಿದ್ದವರು ಅಂಬ್ಲಿಗೊಳ್ಳ ಜಲಾಶಯದಲ್ಲಿ (ambligola dam) ಈಜಲು ಮುಂದಾಗಿದ್ದರು.
ಜಗದೀಶ್ ಅವರು ಜಲಾಶಯದಲ್ಲಿ ಸ್ನಾನಕ್ಕೆ ಮುಂದಾಗಿದ್ದರು. ಈ ವೇಳೆ ಅವರು ಮುಳುಗಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜಗದೀಶ್ ಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ – ಮಾಲೀಕಳಿಗಾಗಿ ಆಸ್ಪತ್ರೆ ಬಾಗಿಲಲ್ಲೇ ಕಾದು ಕುಳಿತ ನಾಯಿ, ಇದು ರಿಯಲ್ ಚಾರ್ಲಿ ಕಥೆ
ಅಗ್ನಿಶಾಮಕ ದಳ ಸಿಬ್ಬಂದಿ, ಮುಳುಗು ತಜ್ಞರು ಭಾನುವಾರ ರಾತ್ರಿಯವರೆಗೆ ಶೋಧ ಕಾರ್ಯ ನಡೆಸಿದ್ದರು. ಹುಡುಕಾಟದ ವೀಕ್ಷಣೆಗೆ ದೊಡ್ಡ ಸಂಖ್ಯೆಯ ಜನ ಸೇರಿದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200