ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021
ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್ಬೋಲೆ ಗೇಟ್ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು.
ಅಕ್ಕಪಕ್ಕದ ಊರಿಗೆ ಪೈಪ್ಲೈನ್
ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ ನೀರಾವರಿ ಸೌಲಭ್ಯವಿಲ್ಲ. ಪೈಪ್ ಮೂಲಕ ಈ ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಾಶ್ವತ ನೀರಾವರಿ ಯೋಜನೆ ಜಾರಿ ಈ ಭಾಗದ ರೈತರಿಗೆ ನೀರಿನ ಸಮಸ್ಯೆ ನಿವಾರಿಸಲಿದೆ ಎಂದರು.
ಲೋಕಾರ್ಪಣೆ ಮಾಡ್ತಾರೆ ಸಿಎಂ
ಬಹುನಿರೀಕ್ಷಿತ ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಯ ಲೋಕಾರ್ಪಣೆ ಮಾಡಲಿದ್ದಾರೆ. ಪುರದಕೆರೆ ಏತ ನೀರಾವಾರಿ ಯೋಜನೆ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ತಾಳಗುಂದ, ಉಡುಗಣಿ, ಹೊಸೂರು ಹೋಬಳಿ ರೈತರಿಗೆ ನೀರು ಪೂರೈಸಬಹುದಾಗಿದೆ ಎಂದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಮಹಾಲಿಂಗಪ್ಪ, ಪ್ರಮುಖರಾದ ಗಾಯತ್ರಿದೇವಿ ಮಲ್ಲಪ್ಪ, ಕೊಳಗಿ ರೇವಣಪ್ಪ, ಕೆ.ಹಾಲಪ್ಪ, ಸುಕೇಂದ್ರಪ್ಪ, ಟಿ.ಎಸ್.ಮೋಹನ್, ಶಶಿಧರ್ ಚುರ್ಚಿಗುಂಡಿ, ಸುರೇಶ್ ನಾಯ್ಕ, ಯತೀಶ್ಚಂದ್ರ ಸೇರಿದಂತೆ ಹಲವರು ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200