ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2021
ಭರ್ತಿಯಾಗಿರುವ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ ಅವರೊಂದಿಗೆ ಬಾಗಿನ ಅರ್ಪಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಈ ಜಲಾಶಯ ಸುಮಾರು 7 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿದೆ. ವಿಶೇಷವಾದ ಗೋಡ್ಬೋಲೆ ಗೇಟ್ಗಳನ್ನು ಅಂಜನಾಪುರ ಜಲಾಶಯಕ್ಕೆ ಅಳವಡಿಸಲಾಗಿದೆ ಎಂದರು.
ಅಕ್ಕಪಕ್ಕದ ಊರಿಗೆ ಪೈಪ್ಲೈನ್
ಅಂಜನಾಪುರ ಜಲಾಶಯದ ಪಕ್ಕದಲ್ಲಿದ್ದರೂ ಹಾರೋಗೊಪ್ಪ, ಅತ್ತಿಬೈಲು, ತರಲಘಟ್ಟ ಸೇರಿದಂತೆ ಹಲವು ಗ್ರಾಮಗಳಿಗೆ ನೀರಾವರಿ ಸೌಲಭ್ಯವಿಲ್ಲ. ಪೈಪ್ ಮೂಲಕ ಈ ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಾಶ್ವತ ನೀರಾವರಿ ಯೋಜನೆ ಜಾರಿ ಈ ಭಾಗದ ರೈತರಿಗೆ ನೀರಿನ ಸಮಸ್ಯೆ ನಿವಾರಿಸಲಿದೆ ಎಂದರು.
ಲೋಕಾರ್ಪಣೆ ಮಾಡ್ತಾರೆ ಸಿಎಂ
ಬಹುನಿರೀಕ್ಷಿತ ಹೊಸಳ್ಳಿ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳ್ಳಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯೋಜನೆಯ ಲೋಕಾರ್ಪಣೆ ಮಾಡಲಿದ್ದಾರೆ. ಪುರದಕೆರೆ ಏತ ನೀರಾವಾರಿ ಯೋಜನೆ ಪ್ರಾಯೋಗಿಕ ಪರೀಕ್ಷೆ ಯಶಸ್ವಿಯಾಗಿದೆ. ತಾಳಗುಂದ, ಉಡುಗಣಿ, ಹೊಸೂರು ಹೋಬಳಿ ರೈತರಿಗೆ ನೀರು ಪೂರೈಸಬಹುದಾಗಿದೆ ಎಂದರು.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಮಹಾಲಿಂಗಪ್ಪ, ಪ್ರಮುಖರಾದ ಗಾಯತ್ರಿದೇವಿ ಮಲ್ಲಪ್ಪ, ಕೊಳಗಿ ರೇವಣಪ್ಪ, ಕೆ.ಹಾಲಪ್ಪ, ಸುಕೇಂದ್ರಪ್ಪ, ಟಿ.ಎಸ್.ಮೋಹನ್, ಶಶಿಧರ್ ಚುರ್ಚಿಗುಂಡಿ, ಸುರೇಶ್ ನಾಯ್ಕ, ಯತೀಶ್ಚಂದ್ರ ಸೇರಿದಂತೆ ಹಲವರು ಇದ್ದರು.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















