ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020
ಶಿಕಾರಿಪುರವನ್ನು ಜಿಲ್ಲೆ ಮಾಡುವ ಉದ್ದೇಶವಿಲ್ಲ. ಆದರೆ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, 6 ಕೋಟಿಯ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ರಾಘವೇಂದ್ರ, ಶಿಕಾರಿಪುರವನ್ನು ಜಿಲ್ಲೆ ಮಾಡುವುದಿಲ್ಲ ಎಂದರು.
ಕರೋನ ಕಾಲದಲ್ಲೂ ಅಭಿವೃದ್ಧಿ ಕಾಣುತ್ತಿರುವ ಏಕೈಕ ತಾಲೂಕು ಎಂದರೆ ಶಿಕಾರಿಪುರ. ಗುಂಡೂರಾವ್ ಅವರ ಸರ್ಕಾರವಿದ್ದಾಗಲೇ ಕಲ್ಲೊಡ್ಡು ಯೋಜನೆ ಪ್ರಸ್ತಾಪವಿತ್ತು. ಈ ಯೋಜನೆಯಿಂದ ಸಾಗರದಲ್ಲಿ ದೊಡ್ಡ ಪ್ರಮಾಣದ ಜಮೀನು ಮುಳುಗಡೆಯಾಗಲಿದೆ ಎಂಬ ಆತಂಕವಿದೆ. ಹೆಚ್ಚು ಭೂಮಿ ಮುಳುಗಡೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200