ಹೊಸಳ್ಳಿ ಏತ ನೀರಾವರಿ ಯೋಜನೆ ಸ್ಥಳಕ್ಕೆ ಅಂಜಾನಪುರದ ರೈತರೊಂದಿಗೆ ಸಂಸದ ರಾಘವೇಂದ್ರ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಸೆಪ್ಟಂಬರ್ 2020

ಹೊಸಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯ ಸ್ಥಳಕ್ಕೆ ಅಂಜನಾಪುರ ಹೋಬಳಿ ರೈತರೊಂದಿಗೆ ತೆರಳಿದ ಸಂಸದ ಬಿ.ವೈ.ರಾಘವೇಂದ್ರ, ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ ನೀರಾವರಿ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಿದರು.

ಏತ ನೀರಾವರಿ ಯೋಜನೆ ಮೂಲಕ ಅಂಜನಾಪುರ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ. 250 ಕೋಟಿಯ ಈ ಯೋಜನೆಯಿಂದ ಶಿಕಾರಿಪುರದ 18 ಗ್ರಾಮಗಳು, ಶಿವಮೊಗ್ಗದ 32 ಗ್ರಾಮಗಳಿಗೆ ನೀರು ಹರಿಸಲಾಗುತ್ತದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಗಳಿಗು ಕುಡಿಯುವ ನೀರಿನ ಅನುಕೂಲ ಆಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಅರುಂಧತಿ, ತಾಲೂಕು ಪಂಚಾಯಿತಿ ಸದಸ್ಯ ಸುರೇಶ್ ನಾಯ್ಕ, ಶಶಿಧರ ಚುರ್ಚಿಗುಂಡಿ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಎಪಿಎಂಸಿ ಅಧ್ಯಕ್ಷ ರುದ್ರಮುನಿ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 10, 2020

Leave a Comment