ಪೆಟ್ರೋಲ್‌ ತುಂಬಿದ್ದ ಲಾರಿ ಪಲ್ಟಿ, ಮುಂಜಾಗ್ರತ ಕ್ರಮವಾಗಿ ಹೆದ್ದಾರಿ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 17 FEBRUARY 2021

ಚಾಲಕನ ನಿಯಂತ್ರಣ ತಪ್ಪಿದ ಪೆಟ್ರೋಲ್ ತುಂಬಿದ ಲಾರಿಯೊಂದು ಹೆದ್ದಾರಿ ಪಕ್ಕದ ಗದ್ದೆಗೆ ಉರುಳಿದೆ. ಅಹಿತಕರ ಘಟನೆ ಸಂಭವಿಸುವುದನ್ನು ತಡೆಯಲು ಪೊಲೀಸರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ಶಿಕಾರಿಪುರದ ಉಡುಗಣಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ. ಟ್ಯಾಂಕರ್‍ ಪಲ್ಟಿಯಾಗಿ ತೈಲ ಸೋರಿಕೆಯಾಗಿತ್ತು. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಶಿಕಾರಿಪುರ – ಶಿರಾಳಕೊಪ್ಪ  ನಡುವೆ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದರಿಂದ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಟ್ಯಾಂಕರ್ ಮೇಲೆತ್ತಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment