4 ಕ್ವಿಂಟಾಲ್‌ ಅಡಿಕೆ ಕದ್ದಿದ್ದ ಇಬ್ಬರು ಆರೋಪಿಗಳು ಅರೆಸ್ಟ್‌, ಎಲ್ಲಿ? ಆಗಿದ್ದೇನು?

ಶಿಕಾರಿಪುರ: ಒಣಹಾಕಿದ್ದ ಅಡಿಕೆಯನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕಳುವಾಗಿದ್ದ ಅಡಿಕೆ (arecanut theft) ಹಾಗೂ ಕೃತ್ಯಕ್ಕೆ ಬಳಸಿದ್ದ ಗೂಡ್ಸ್‌ ವಾಹನ ವಶಕ್ಕೆ ಪಡೆಯಲಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಶಿಕಾರಿಪುರ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿತ್ತು. ಭುವನೇಶ್ವರ್ ಎಂಬುವವರು ತಮ್ಮ ಮನೆಯ ಮುಂದಿನ ಖಾಲಿ ಜಾಗದಲ್ಲಿ ಸುಮಾರು 16 ಕ್ವಿಂಟಾಲ್ ಸಿಪ್ಪೆ ಗೋಟು ಅಡಿಕೆ ಒಣಹಾಕಿದ್ದರು. ಈ ಪೈಕಿ ಸುಮಾರು ₹1,00,000 ಮೌಲ್ಯದ 4 ಕ್ವಿಂಟಾಲ್ ಅಡಿಕೆಯನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು. ಈ ಕುರಿತು ಮಾರ್ಚ್ 28ರಂದು ಶಿರಾಳಕೊಪ್ಪ ಠಾಣೆಯಲ್ಲಿ ದೂರು ದಾಖಲಾಗಿತ್ತು.

arecanut theft case at Shiralakoppa police station limits

ವಿಚಾರಣೆ ವೇಳೆ ಬಾಯಿ ಬಿಟ್ಟರು

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್.ಬಿ, ಎಎಸ್‌ಪಿ ಕಾರಿಯಪ್ಪ.ಎಂ.ಜಿ, ಶಿಕಾರಿಪುರ ಡಿವೈಎಸ್‌ಪಿ ಕೇಶವ.ಕೆ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಶಿಕಾರಿಪುರ ಇನ್ಸ್‌ಪೆಕ್ಟರ್‌ ಸಂತೋಷ್‌ ಎಂ.ಪಾಟೀಲ್‌, ಶಿರಾಳಕೊಪ್ಪ ಪಿಎಸ್ಐ ಪ್ರಶಾಂತ ಕುಮಾರ ಟಿ.ಬಿ. ನೇತೃತ್ವದ ತಂಡವು ತನಿಖೆ ನಡೆಸಿತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

Shiralakoppa-Police-arrest-two-for-theft-of-Arecanut
ಕಳುವಾಗಿದ್ದ ಅಡಿಕೆ ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್‌ ವಾಹನವನ್ನು ವಶಕ್ಕೆ ಪಡೆದ ಶಿರಾಳಕೊಪ್ಪ ಠಾಣೆ ಪೊಲೀಸರು.

ಬಂಧಿತ ಆರೋಪಿಗಳು ಯಾರು?

  • ಆರೋಪಿ 1: ಮಹಮ್ಮದ್ ಮನ್ಸೂರ್ (30), ಕುಂಬಾರ್ ಗುಂಡಿ ಕೊಪ್ಪಲು, ಶಿಕಾರಿಪುರ ಟೌನ್.
  • ಆರೋಪಿ 2: ಷಹಾದ ಉಲ್ಲಾ (35), ಗಬ್ಬೂರು, ಶಿಕಾರಿಪುರ ಟೌನ್.

ಬಂಧಿತರಿಂದ 10 ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿದ್ದ 4 ಕ್ವಿಂಟಾಲ್ ಸಿಪ್ಪೆ ಗೋಟು ಅಡಿಕೆ ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ₹1,00,000 ಎಂದು ಅಂದಾಜಿಸಲಾಗಿದೆ. ಇನ್ನು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸುಜುಕಿ ಸೂಪರ್ ಕ್ಯಾರಿ ಗೂಡ್ಸ್ ವಾಹನವನ್ನು ಸೀಜ್‌ ಮಾಡಲಾಗಿದೆ. ಇದರ ಮೌಲ್ಯ ₹5,00,000 ಎಂದು ಅಂದಾಜಿಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ ಮಾರುಕಟ್ಟೆ; ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment