ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIKARIPURA | 18 ಜನವರಿ 2020
ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ SDPI ಸಂಘಟನೆ ಸಂಚು ರೂಪಿಸಿದೆ ಎಂಬುದು ಸಾಬೀತಾಗಿದೆ. ಇಂತಹ ದೇಶದ್ರೋಹಿ ಸಂಘಟನೆಯನ್ನು ಶಾಶ್ವತವಾಗಿ ಬ್ಯಾನ್ ಮಾಡಬೇಕು. ಮುಂದೆ ಈ ಸಂಘಟನೆ ತಲೆ ಎತ್ತದಂತೆ ನೋಡಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಿಕಾರಿಪುರ ತಾಲೂಕು ಚಿಕ್ಕಮಾಗಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್ ಅವರು, SDPI ಮತ್ತು ಪಿಎಫ್ಐ ಸಂಘಟನೆಗಳ ಕುರಿತು ಹಿಂದಿನಿಂದಲು ಹೇಳುತ್ತಿದ್ದೇವೆ. ಮಡಿಕೇರಿಯಲ್ಲಿ ಕುಟ್ಟಪ್ಪ, ಬೆಂಗಳೂರಿನ ರುದ್ರೇಶ್ ಹತ್ಯೆ ಹಿಂದೆಯೂ ಈ ಸಂಘಟನೆಗಳ ಕೈವಾಡ ಇದೆ ಎಂದು ಹೇಳಿಕೊಂಡು ಬಂದಿದ್ದೇವೆ. ಈಗ ಸಂಸದ ತೇಜಸ್ವಿ ಸೂರ್ಯ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಿರುವುದು ನಮ್ಮ ವಾದವನ್ನು ಸಾಬೀತುಪಡಿಸಿದೆ ಎಂದರು.
ಟಿಪ್ಪು ಅಧ್ಯಾಯ ಕುರಿತು ನಾಳೆ ಚರ್ಚೆ
ಶಾಲಾ ಪಠ್ಯ ಪುಸ್ತಕದಲ್ಲಿ ಟಿಪ್ಪು ಅಧ್ಯಾಯದ ಕುರಿತು ಇತಿಹಾಸಕಾರರ ಸದಸ್ಯರನ್ನೊಳಗೊಂಡ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಾಳೆ ಚರ್ಚೆ ನಡೆಸಲಿದ್ದೇನೆ. ಆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
Education Minister Suresh Kumar visited shikaripura. He spoke to media about permanent ban on SDPI and PFI
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





