ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ ಬೆನ್ನಿಗೆ ಶಿಕಾರಿಪುರ ಸಂಪೂರ್ಣ ಸ್ಥಬ್ಧವಾಗಿದೆ. ಪಟ್ಟಣದಾದ್ಯಂತ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.
ಶಿಕಾರಿಪುರ ಪಟ್ಟಣದ ಬಸ್ ನಿಲ್ದಾಣ ಸುತ್ತಮುತ್ತ, ಪೆಟ್ರೋಲ್ ಬಂಕ್ ರಸ್ತೆ, ಶಿಶುವಿಹಾರ ರಸ್ತೆ, ಎಸ್.ಹೆಚ್.ರಸ್ತೆ, ತಾಲೂಕು ಆಫೀಸ್ ರಸ್ತೆ, ಮಾಸೂರು ರಸ್ತೆಯಲ್ಲಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ
ರಾಜೀನಾಮೆ ಘೋಷಣೆ ಮಾಡುತ್ತಿದ್ದಂತೆ ಪಟ್ಟಣದಲ್ಲಿ ವರ್ತಕರು ನಿರ್ಧಾರ ಮಾಡಿ, ಅಂಗಡಿಗಳನ್ನು ಬಂದ್ ಮಾಡಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಶಿಕಾರಿಪುರ ಪಟ್ಟಣದಲ್ಲಿ ರಸ್ತೆಗಿಳಿದು ಘೋಷಣೆ ಕೂಗಿದ್ದಾರೆ. ಯಡಿಯೂರಪ್ಪ ಪರವಾಗಿ ಘೋಷಣೆಗಳನ್ನು ಕೂಗಿ, ಜೈಕಾರ ಕೂಡಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200