ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIKARIPURA NEWS, 21 SEPTEMBER 2024 : ಬಿಜೆಪಿ ಮತ್ತು ಜೆಡಿಎಸ್ ನಾಯಕರ ಕುತಂತ್ರದಿಂದ ಸಿದ್ದರಾಮಯ್ಯನವರ ತೇಜೋವಧೆ ನಡೆಯುತ್ತಿದೆ. ಇದನ್ನು ಖಂಡಿಸಿ ಸೆ.26ರಂದು ಪಟ್ಟಣವನ್ನು ಸಂಪೂರ್ಣವಾಗಿ ಬಂದ್ (Bandh) ಮಾಡಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಅಹಿಂದ ಒಕ್ಕೂಟದ ಯುವ ಘಟಕದ ಅಧ್ಯಕ್ಷ ನಗರದ ಮಾಲತೇಶ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜಕಾರಣದಲ್ಲಿ ಬಿಳಿ ಹಾಳೆಯಂತಿರುವ ಸಿದ್ದರಾಮಯ್ಯನವರಿಗೆ ಕಳಂಕ ಅಂಟಿಸಲು ಕುತಂತ್ರ ನಡೆಸಿದ್ದಾರೆ. ಈ ಉದ್ದೇಶಕ್ಕಾಗಿ ಮುಡಾ ಹಗರಣ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರವನ್ನು ಖಂಡಿಸಿ ಬಂದ್ಗೆ ಕರೆ ನೀಡಲಾಗಿದೆ. ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಬಂದ್ ಮಾಡಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪುರಸಭೆ ಸದಸ್ಯ ಉಳ್ಳಿ ದರ್ಶನ್, ಭಂಡಾರಿ ಮಾಲತೇಶ್, ತಾಲ್ಲೂಕು ಅಹಿಂದ ಸಂಘಟನೆ ಅಧ್ಯಕ್ಷ ಕಾಗಿನಲ್ಲಿ ರಂಗಪ್ಪ, ಕಸಬಾ ಸೊಸೈಟಿ ನಿರ್ದೇಶಕ ನಗರದ ರವಿ ಕಿರಣ್, ಡಿ.ಆರ್.ಗಿರೀಶ್, ಅಹಿಂದ ಮುಖಂಡರಾದ ನಗರದ ರವೀಂದ್ರ ಕಿಟ್ಟಿ, ಬನ್ನೂರು ಸುನಿಲ್ ಇದ್ದರು.
ಇದನ್ನೂ ಓದಿ » ಗೋಪಿ ಸರ್ಕಲ್ನಲ್ಲಿ ರಸ್ತೆ ಮೇಲೆ ಕುಳಿತು ಸಂಸದ ರಾಘವೇಂದ್ರ ಆಕ್ರೋಶ, ಸಿಎಂ ರಾಜೀನಾಮೆಗೆ ಪಟ್ಟು
LATEST NEWS
- ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

- ಮಾರ್ಚ್ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

- ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು
















