‘ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ರಾಜ್ಯದ ಪಾಲು ಹಣ ರಿಲೀಸ್, ಕಲ್ಲೊಡ್ಡು, ಮೂಡಿ ಯೋಜನೆಯು ಜಾರಿಗೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019

71306806 696779200801993 144724051229671424 n.jpg? nc cat=107& nc oc=AQnzIeO3eNzFBhjpr 9oHPw6i5jLn0DIuhfut3oVyn2hVeIPjVVkat4ehlIFHVOMcn4& nc ht=scontent.fblr1 3

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಭೂಸ್ವಾಧೀನಕ್ಕೆ ಶಿಕಾರಿಪುರದಲ್ಲಿ ಕಚೇರಿ ತೆರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಕಚೇರಿ ಉದ್ಘಾಟನೆ ಮಾಡಿದರು.

Prashanth GPS copy

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯದ ಪಾಲು 750 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿದರು.

ಕಲ್ಲೊಡ್ಡು, ಮೂಡಿಗೆ ಜಾರಿಗೆ ಬರಲಿವೆ

ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ನೀಗಿಸಲು ವಿವಿಧ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ನೀರಾವರಿ ಇಲಾಖೆ ತಮ್ಮ ಕೈಯಲ್ಲೆ ಇದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.

70578780 2398489037062520 5710410120999993344 n.jpg? nc cat=106& nc oc=AQlWnu1kDEStA4X6f8D0Ngn riKnp2lKDZQkkcOr9WNpxjl sVYKxf44yb7sCXyTX3I& nc ht=scontent.fblr1 3

ಶಿಕಾರಿಪುರ ಮತ್ತು ಸೊರಬ ತಾಲೂಕಿಗೆ ನೀರಾವರಿ ಕಲ್ಪಿಸಲು ಕಲ್ಲೊಡ್ಡು ಮತ್ತು ಮೂಡಿ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಇದಕ್ಕಾಗಿ ಈಗಾಗಲೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment