ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 FEBRUARY 2024
SHIMOGA : ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿ ಬೆಡ್ ಶೀಟ್ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ ಇದ್ದ ಬ್ಯಾಗ್ ಅನ್ನು ಅಂಗಡಿಯಲ್ಲಿ ಇಟ್ಟು ಸಂತೆಗೆ ಹೋಗಿದ್ದರು. ಕೆಲವು ಹೊತ್ತಿನ ಬಳಿಕ ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡಿದೆ ಎಂದು ವಾಟ್ಸಪ್ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಕಾಡು ಹಂದಿಗೆ ಇಡಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು ಅವರ ವಿಚಾರಣೆ ಮಾಡಲಾಗುತ್ತದೆ. ಇನ್ನು ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?
LATEST NEWS
- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

- ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

About The Editor
ನಿತಿನ್ ಆರ್.ಕೈದೊಟ್ಲು
















