ಶಿಕಾರಿಪುರಕ್ಕೆ ಶ್ರೀಲಂಕಾ ದೇಶದ ಸಂಸದ ಭೇಟಿ, ಬಿ.ವೈ.ರಾಘವೇಂದ್ರ ಜೊತೆಗೆ ಚರ್ಚೆ

ಶಿಕಾರಿಪುರ: ಶ್ರೀಲಂಕಾ ದೇಶದ ಜಾಫ್ನಾ ಮತ್ತು ಕಿಲಿನೊಚ್ಚಿ ಚುನಾವಣಾ ಜಿಲ್ಲೆಯ ಸಂಸದ ಶ್ರೀಧರನ್ ಶಿವಜ್ಞಾನಂ ನೇತೃತ್ವದ ನಿಯೋಗ ಶನಿವಾರ ಶಿಕಾರಿಪುರದಲ್ಲಿರುವ ಸಂಸದ ಬಿ.ವೈ.ರಾಘವೇಂದ್ರ ಅವರ ನಿವಾಸಕ್ಕೆ ಭೇಟಿ ನೀಡಿ, ಚರ್ಚೆ ನಡೆಸಿತು. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸೌಹಾರ್ದಯುತ ಭೇಟಿಯ ಸಂದರ್ಭ, ಶ್ರೀಲಂಕಾ ಸಂಸದ ಶ್ರೀಧರನ್ ಶಿವಜ್ಞಾನಂ ಅವರನ್ನು ಮಲೆನಾಡಿನ ಸಂಪ್ರದಾಯದಂತೆ ಸನ್ಮಾನಿಸಲಾಯಿತು. ಇದೇ ವೇಳೆ ಭಾರತ ಮತ್ತು ಶ್ರೀಲಂಕಾ ದೇಶಗಳ ನಡುವಿನ ಸಾಂಸ್ಕೃತಿಕ ಬಾಂಧವ್ಯ, ಉಭಯ ದೇಶಗಳ ರಾಜಕೀಯ ಹಾಗೂ ಪ್ರಾದೇಶಿಕ ಅಭಿವೃದ್ಧಿ ವಿದ್ಯಮಾನಗಳು ಸೇರಿ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಸಂಸದ ರಾಘವೇಂದ್ರ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

Srilanka-MP-Visit-Shikaripura-meets-MP-BY-Raghavendra

ಮಲೆನಾಡಿನ ಕೃಷಿ ಪದ್ಧತಿ, ಪ್ರವಾಸೋದ್ಯಮ ಹಾಗೂ ಇತಿಹಾಸದ ಬಗ್ಗೆ ಶ್ರೀಲಂಕಾ ಸಂಸದ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಅವರೊಂದಿಗೆ ಆಗಮಿಸಿದ್ದ ಶ್ರೀಲಂಕಾದ ಗಣ್ಯರು ಹಾಗೂ ಸ್ಥಳೀಯ ಭಾಗದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!