ಯಡಿಯೂರಪ್ಪ ಬೆನ್ನಿಗೆ ನಿಂತ ಸ್ವಾಮೀಜಿ, ನಾಯಕತ್ವ ಬದಲಾದರೆ ಕರೋನಾಗಿಂತಲೂ ದೊಡ್ಡ ಅನಾಹುತದ ಎಚ್ಚರಿಕೆ

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 12 JUNE 2021

ನಾಯಕತ್ವದ ಬದಲಾವಣೆ ವಿಚಾರದಲ್ಲಿ ಶಿವಮೊಗ್ಗದ ಕೆಲವು ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. ನಾಯಕತ್ವ ಬದಲಾವಣೆಯಾದರೆ ಕರೋನಾಗಿಂತಲೂ ದೊಡ್ಡ ಅನಾಹುತ ಸಂಭವಿಸಲಿದೆ ಅಂತಾ ಮಠಾಧೀಶರೊಬ್ಬರು ಕೇಂದ್ರ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಶಿಕಾರಿಪುರ ತಾಲೂಕು ಕಾಳೇನಹಳ್ಳಿ ಶಿವಯೋಗಾಶ್ರಮಕ್ಕೆ ಸಿಎಂ ಯಡಿಯೂರಪ್ಪ ಅವರು ಇವತ್ತು ಭೇಟಿ ನೀಡಿದ್ದಾರೆ. ಕಾಳೇನಹಳ್ಳಿಯ ಶ್ರೀಗಳು ಲಿಂಗೈಕ್ಯರಾದಾಗ ಸಿಎಂ ಭೇಟಿ ನೀಡಲು ಸಾದ್ಯವಾಗಿರಲಿಲ್ಲ. ಆದ್ದರಿಂದ ಇವತ್ತು ಮಠಕ್ಕೆ ಭೇಟಿ ನೀಡಿದ್ದರು.

ಕರೋನಾಗಿಂತಲೂ ದೊಡ್ಡ ಅನಾಹುತ

ಈ ವೇಳೆ ಕಾಳೇನಹಳ್ಳಿ ಮಠದಲ್ಲಿ ಮಾತನಾಡಿದ ಬೆಕ್ಕಿನಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಯಾವುದೆ ಕಾರಣಕ್ಕೂ ನಾಯಕತ್ವ ಬದಲಾವಣೆ ಮಾಡಬಾರದು. ಒಂದು ವೇಳೆ ನಾಯಕತ್ವದ ಬದಲಾವಣೆ ಮಾಡಿದರೆ ಕರೋನಾಗಿಂತಲು ದೊಡ್ಡ ಅನಾಹುತ ಸಂಭವಿಸಿದೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಭೇಟಿ, ಸ್ವಾಮೀಜಿ ಹೇಳಿಕೆ ವಿಡಿಯೋ ಇಲ್ಲಿದೆ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment