ಮಗಳ ಮದುವೆ ಮುಗಿಸಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಆಘಾತ, ಆಗಿದ್ದೇನು?

ಶಿರಾಳಕೊಪ್ಪ: ಪಟ್ಟಣದ ಮನೆಯೊಂದರ ಹಿಂಬಾಗಿಲು ಮುರಿದು ಕಪಾಟಿನಲ್ಲಿದ್ದ ಸುಮಾರು ₹90,000 ಮೌಲ್ಯದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಶಿರಾಳಕೊಪ್ಪದ ಮುಜಾಮಿಲ್ ಅಹಮ್ಮದ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮುಜಾಮಿಲ್ ಅವರ ಮಗಳ ಮದುವೆಯು ಉಡುಗಣಿಯ ಶಾದಿ ಮಹಲ್‌ನಲ್ಲಿ ಏರ್ಪಾಡಾಗಿತ್ತು. ಈ ಹಿನ್ನೆಲೆ ಅವರ ಸಂಬಂಧಿ ತಂದಿದ್ದ ₹60,000 ಮೌಲ್ಯದ 4 ಗ್ರಾಂ ತೂಕದ ಒಂದು ಜೊತೆ ಬಂಗಾರದ ಓಲೆ, ₹30,000 ಮೌಲ್ಯದ 2 ಗ್ರಾಂ ತೂಕದ ಬಂಗಾರದ ಕಿವಿಯ ಗುಂಡನ್ನು ಮುಜಾಮಿಲ್ ಅವರ ಪತ್ನಿ ಬೆಡ್ ರೂಂನ ಕಪಾಟಿನಲ್ಲಿಟ್ಟು ಬೀಗ ಹಾಕಿದ್ದರು.

SHIKARIPURA-NEWS-GRAPHICS-BY-SHIVAMOGGA-LIVE.

ಕಾರ್ಯಕ್ರಮಕ್ಕೆ ಹೋದಾಗ ಕಳ್ಳತನ

ಕುಟುಂಬದವರೆಲ್ಲರು ಮನೆಗೆ ಬೀಗ ಹಾಕಿಕೊಂಡು ಉಡುಗಣಿಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಬಂದಾಗ ಮನೆಯಲ್ಲಿ ಕಳ್ಳತನ ಆಗಿರುವುದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಕಳ್ಳರು ಮನೆಯ ಹಿಂಬಾಗಿಲಿನ ಮೇಲಿದ್ದ ಗ್ರಿಲ್ ಜಾಗದಿಂದ ಒಳನುಗ್ಗಿ ಕಪಾಟಿನಲ್ಲಿದ್ದ 6 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Nanjappa Hospital Advertisement

ಘಟನೆ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
Shivamogga Live Promotion