BANGALORE NEWS, 8 OCTOBER 2024 : ಶಿಕಾರಿಪುರ, ಶಿರಾಳಕೊಪ್ಪ ನಡುವೆ ನಿರ್ಮಿಸಿರುವ ಟೋಲ್ ಗೇಟ್ (Toll Gate) ಅನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿತು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅವೈಜ್ಞಾನಿಕ ಟೋಲ್ನಿಂದ ಪ್ರತಿನಿತ್ಯ ತಾಲೂಕು ಕೇಂದ್ರ ಶಿಕಾರಿಪುರಕ್ಕೆ ಓಡಾಡುವ ಜನರಿಗೆ ತೊಂದರೆಯಾಗಿದೆ. ರೈತರು ಬೆಳೆಗಳನ್ನು, ರಸಗೊಬ್ಬರ, ಕೃಷಿ ಉಪಕರಣ ತರಲು ಓಡಾಡಲೇ ಬೇಕಾದ ಅನಿವಾರ್ಯತೆಯಿದೆ. ಪ್ರತಿನಿತ್ಯ ನೂರಾರು ಬಸ್ಗಳು ಮಾರ್ಗದಲ್ಲಿ ಓಡಾಡುತ್ತವೆ. ಟೋಲ್ ಕಾರಣದಿಂದ ಬಸ್ ದರ ಏರಿಕೆ ಮಾಡಲಾಗಿದೆ. ಜನಸಾಮಾನ್ಯರ ಮೇಲೆ ಇದರ ಹೊರೆ ಬೀಳಲಿದೆ. ಇದನ್ನು ತಪ್ಪಿಸಲು ಈಗಿರುವ ಟೋಲ್ ಅನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸಚಿವರಿಗೆ ಶಾಸಕ ಬಿ.ವೈ.ವಿಜಯೇಂದ್ರ ಮನವರಿಕೆ ಮಾಡಿದರು.
ಟೋಲ್ ಸ್ಥಳಾಂತರಿಸುವಂತೆ ಸ್ಥಳೀಯರು, ಟೋಲ್ ವಿರೋಧಿ ಹೋರಾಟ ಸಮಿತಿಯವರು ಸಾಕಷ್ಟು ಪ್ರತಿಭಟನೆ, ರಸ್ತೆ ತಡೆ ನಡೆಸಿದ್ದಾರೆ. ಇದನ್ನು ತಾವು ಗಂಭೀರವಾಗಿ ಪರಿಗಣಿಸಿ ಟೋಲ್ ಸ್ಥಳಾಂತರಿಸಬೇಕು. ಇದನ್ನು ಪರಾಮರ್ಶಿಸದೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಅಧಿಕಾರಿಗಳ ವ್ಯಾಪ್ತಿಯಲ್ಲಿ ಸ್ಥಳಾಂತರ ಆಗದೇ ಇರುವ ಕಾರಣ ನೀವು ಸೂಚನೆ ನೀಡಿ ಟೋಲ್ ಸ್ಥಳಾಂತರಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ಮಂಡಲ ಅಧ್ಯಕ್ಷ ಹನುಮಂತಪ್ಪ, ಮಂಡಲ ರೈತ ಮೋರ್ಚಾ ಅಧ್ಯಕ್ಷ ಯೋಗೇಶ್, ಕಾರ್ಯದರ್ಶಿ ಅಶೋಕ್, ಜಗದೀಶ್, ಗಿರೀಶ್ ಧಾರವಾಡ, ಟೋಲ್ ವಿರೋಧಿ ಸಮಿತಿ ಅಧ್ಯಕ್ಷ ಶಿವರಾಜ್ ಇತರರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ