SHIVAMOGGA LIVE NEWS | 15 MAY 2024
SHIKARIPURA : ಲೋಕಸಭೆ ಚುನಾವಣೆ ಮತ ಎಣಿಕೆಗೆ 20 ದಿನ ಬಾಕಿ ಇದೆ. ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ಬೆಟ್ಟಿಂಗ್ ಜೋರಾಗಿದೆ. ಈಚೆಗೆ ಶಿಕಾರಿಪುರ ತಾಲೂಕು ಕಲ್ಮನೆ ಗ್ರಾಮದ ರವೀಂದ್ರ ಎಂಬುವವರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಟ್ರಾಕ್ಟರ್ (Tractor challenge) ಪಣಕ್ಕಿಟ್ಟಿದ್ದರು. ಶಿಕಾರಿಪುರದ ಜಮೀನ್ದಾರ್ ಮಂಜುನಾಥ್ ಎಂಬುವವರು ಸವಾಲು ಸ್ವೀಕರಿಸಿದ್ದಾರೆ.
ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಲಿದ್ದಾರೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇಗುಲದಲ್ಲಿ ಎಲ್ಲರ ಸಮುಖದಲ್ಲಿ ಟ್ರಾಕ್ಟರ್ ಕೀ ನೀಡಿ ಸವಾಲು ಸ್ವೀಕರಿಸಲು ಸಿದ್ಧ ಎಂದು ವಿಡಿಯೋ ಮಾಡಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಕ್ಷೇತ್ರದಲ್ಲಿ ತೀವ್ರ ಕುತೂಹಲವಿದೆ. ಅಭ್ಯರ್ಥಿಗಳ ಗೆಲುವು, ಸೋಲಿನ ಕುರಿತು ನಾನಾ ವಿಶ್ಲೇಷಣೆಗಳು ನಡೆಯುತ್ತಿವೆ. ಅದರ ಜೊತೆಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ.
ಇದನ್ನೂ ಓದಿ – ‘ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ’, ಟ್ರಾಕ್ಟರ್ ಪಣಕ್ಕಿಟ್ಟು ಶಿಕಾರಿಪುರದ ರೈತನ ಓಪನ್ ಚಾಲೆಂಜ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200