ಶಿಕಾರಿಪುರ: ಇಲ್ಲಿನ ವಿಜಯಲಕ್ಷ್ಮಿ ರೈಸ್ ಮಿಲ್ ಆವರಣದಲ್ಲಿ ನಿಲ್ಲಿಸಿದ್ದ 3 ಲಾರಿಗಳ ಡೀಸೆಲ್ (Diesel) ಟ್ಯಾಂಕ್ನಲ್ಲಿದ್ದ ಅಂದಾಜು 45,000 ರೂ. ಮೌಲ್ಯದ 450 ಲೀಟರ್ ಡೀಸೆಲ್ ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ನಗರದ ಟಿಪ್ಪುನಗರದ ಸೋನು (26), ಬರ್ಮಪ್ಪ ನಗರದ ಸೈಯದ್ ಹುಸೇನ್ (25) ಬಂಧಿತರು.
ಈ ಬಗ್ಗೆ ಮಾಲೀಕ ಸೊರಬ ತಾಲ್ಲೂಕು ಕೋಲಗುಣಸಿ ನಿವಾಸಿ ವಿಕ್ರಂ ಭಟ್ ಅವರು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿತರಿಂದ ಅಂದಾಜು 9 ಲಕ್ಷ ರೂ. ಮೌಲ್ಯದ ಟಾಟಾ ಇಂಟ್ರಾ ಗೂಡ್ಸ್ ವಾಹನ, 15,000 ರೂ. ನಗದು ಮತ್ತು 30 ಲೀಟರ್ ಸಾಮರ್ಥ್ಯದ 5 ಖಾಲಿ ಕ್ಯಾನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿಕಾರಿಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಕೆ.ಇ.ಕೇಶವ ಅವರ ಮೇಲ್ವಿಚಾರಣೆಯಲ್ಲಿ ಸಿಪಿಐ ಸಂತೋಷ್ ಪಾಟೀಲ್, ಟಿ.ಬಿ.ಪ್ರಶಾಂತ್ ಕುಮಾರ್, ಆರ್.ಸಂತೋಷ ಕುಮಾರ್, ಜಿ. ರಾಕೇಶ್ ಮತ್ತು ಸಲ್ಮಾನ್ ಖಾನ್ ಹಾಜಿ ಅವರನ್ನೊಳಗೊಂಡ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ತಲೆ ಮೇಲೆ ಕ್ಲಾಂಪ್ ಬಿದ್ದು ಕಾರ್ಮಿಕ ಸಾವು, ಸಂಸದ ರಾಘವೇಂದ್ರ ವಿಷಾದ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200