Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?

ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?

28/11/2024 9:18 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS, 28 NOVEMBER 2024

ಶಿಕಾರಿಪುರ : ಇಲ್ಲಿನ ಕಲ್ಮನೆ ಗ್ರಾಮದಲ್ಲಿ ಪತ್ತೆಯಾದ ಕಲ್ಯಾಣ ಚಾಲುಕ್ಯರ ಕಾಲದ ಎರಡು ಶಾಸನಗಳನ್ನು (inscription) ಅಧ್ಯಯನ ಮಾಡಲಾಗಿದೆ. ಹಂಪಿಯ ಪುರಾತತ್ವ ಇಲಾಖೆ ನಿರ್ದೇಶಕ ಆ‌ರ್.ಶೇಜೇಶ್ವರ ನಾಯಕ್ ಮತ್ತು ಮಂಜಪ್ಪ ಕ್ಷೇತ್ರ ಕಾರ್ಯ ನಡೆಸುವ ಸಂದರ್ಭ ಈ ಎರಡು ಶಾಸನಗಳು ದೊರೆತಿವೆ. ಸ್ಥಳೀಯ ಬನ್ನಿಕಾಳಮ್ಮನ ಗುಡಿ ಹತ್ತಿರ ಎರಡು ಕಲ್ಲಿನ ಶಾಸನಗಳು ದೊರೆತಿವೆ.

ಕಲ್ಯಾಣ ಚಾಲುಕ್ಯರ ಅರಸ ಆರನೇ ವಿಕ್ರಮಾದಿತ್ಯನ (8.8.1084-1096) ಕಾಲಕ್ಕೆ ಸೇರಿದವು ಎಂದು ಅಂದಾಜಿಸಲಾಗಿದೆ. ಒಂದನೇ ಶಾಸನದಲ್ಲಿ ಕಲ್ಮನೆಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದೆ. ಶಾಸನದ ಮೇಲ್ಬಾಗದಲ್ಲಿ ಸೂರ್ಯ, ಚಂದ್ರ, ಲಿಂಗಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪವಿದೆ. ಸಂಕಗೊಣ್ಣನ ಹೆಂಡತಿ ಬೆಳಂಬೆ ಭೂಮಿ ದಾನ ನೀಡಿದ ವಿಷಯವಿದೆ.

Two-inscription-found-at-kalmane-in-Shikaripura

ಇನ್ನೊಂದು ಶಾಸನವು ಹದಿನೆಂಟು ಸಾಲುಗಳಿಂದ ಕೂಡಿದೆ. ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇವೆ. ಇದು ಬಹಳ ಸವಕಲಾಗಿದೆ. ಇದರಲ್ಲಿ ಇಲ್ಲಿನ ಬೆಟ್ಟೇಶ್ವರ ದೇವರ ನಂದಾದೀಪಕ್ಕೆ 5 ಗದ್ಯಾಣ ದಾನ ಬಿಟ್ಟಿರುವ ವಿಷಯವಿದೆ. ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಪಲವಾನಿ ಎಂದು ಉಲ್ಲೇಖವಾಗಿದೆ.

ಶಾಸನವನ್ನು ಡಾ. ಜಗದೀಶ್ ಓದಿ ಅರ್ಥೈಸಿದ್ದಾರೆ. ಸ್ಥಳೀಯರಾದ ಪರಶುರಾಮೋಹಿತಾಚಾ‌ರ್, ಮಾಯಾಚಾ‌ರ್, ಶಿವಮೂರ್ತೆಪ್ಪ ಸಹಕರಿಸಿದ್ದಾರೆ.

Inscription found at kalmane

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ಹೆದ್ದಾರಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಕಂಬಗಳು ಸುಸ್ಥಿತಿಗೆ

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article MP-By-Raghavendra-meets-central-agriculture-minister. Adike ಅಡಿಕೆ ಬೆಳೆಗಾರರ ನಿಯೋಗದಿಂದ ಕೇಂದ್ರ ಸಚಿವರ ಭೇಟಿ
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 28 ನವೆಂಬರ್‌ 2024 | ಶಿವಮೊಗ್ಗ ಮಾರುಕಟ್ಟೆಯಲ್ಲಿ ಎಷ್ಟಿದೆ ರೇಟ್‌?

ಇದನ್ನೂ ಓದಿ

Shikaripura-Town-Police-Station
SHIKARIPURA

ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿ ಬದಲು ಮತ್ತೊಬ್ಬ ಯುವಕ ಹಾಜರು, ಕೇಸ್‌ ದಾಖಲು, ಸಿಕ್ಕಿಬಿದ್ದಿದ್ದು ಹೇಗೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/07/2025
Anjanapura-Dam-full-in-2025.
SHIKARIPURA

ಕೋಡಿ ಬಿತ್ತು ಅಂಜನಾಪುರ ಜಲಾಶಯ, ವಾಡಿಕೆಗೂ ಮೊದಲೇ ಭರ್ತಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/06/2025
Lokayuktha-Raid-General-Image
SHIKARIPURA

ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
Imprisonment-for-Shikaripura-lady-and-a-youth
CRIME DIARYSHIKARIPURA

ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Shikaripura-Town-Police-Station
SHIKARIPURA

ಚಿಮುಟದಿಂದ ಚುಚ್ಚಿ ಹೆಂಡತಿಯ ಕೊಲೆ ಮಾಡಿದ ಗಂಡ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Shikaripura-police-nab-thief
SHIKARIPURA

14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿ ಅರೆಸ್ಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?