ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿಕಾರಿಪುರ: ರಾಜ್ಯದ ಉದ್ದಗಲಕ್ಕೂ ಓಡಾಟ ಮಾಡಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಏಕೈಕ ಗುರಿಯೊಂದಿಗೆ ಮುನ್ನಡೆಯುವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yediyurappa) ಹೇಳಿದರು.
ಕುಮದ್ವತಿ ಕಾಲೇಜು ಆವರಣದ ಏಕಲವ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಯಡಿಯೂರಪ್ಪ ಅವರ 84ನೇ ಜನ್ಮದಿನದ ಸಂಭ್ರಮಾಚರಣೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಮಾತು ಸಾಧನೆಯಾಗಬಾರದು. ಬದಲಿಗೆ ಸಾಧನೆಯೇ ಮಾತು ಆಗಬೇಕು ಎಂಬ ಮಂತ್ರದಲ್ಲಿ ನಂಬಿಕೆ ಇಟ್ಟವನು ನಾನು. ಅದಕ್ಕೆ ಶ್ರಮವಹಿಸಿ ಕೆಲಸ ಮಾಡುವುದು ಅಗತ್ಯ. ಶೋಷಿತರ, ದಮನಿತರ ಏಳಿಗೆಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ರೈತರು ಸ್ವಾವಲಂಬಿ ಆಗಲು ರಾಜ್ಯದ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ ಎಂದರು.
ಇದನ್ನೂ ಓದಿ – ಊರುಗಡೂರಿನ ಸಂಕೇತ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಒಂದು ಲಕ್ಷ ರುಪಾಯಿ ನೆರವು
ಶಿಕಾರಿಪುರ, ಶಿವಮೊಗ್ಗದ ರೀತಿ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಹಾಗೂ ಈ ಭ್ರಷ್ಟ ವ್ಯವಸ್ಥೆ ಕಿತ್ತೊಗೆದು ನಾಡಿನ ಜನರು ನೆಮ್ಮದಿಯ ಬದುಕು ಕಟ್ಟಿಕೊಡಲು ಟೊಂಕ ಕಟ್ಟುವೆ ಎಂದು ಹೇಳಿದರು.

ಯಾರೆಲ್ಲ ಏನೆಲ್ಲ ಹೇಳಿದರು?



ತೊಗರ್ಸಿ ಮಳೆಹಿರೇಮಠದ ಶ್ರೀ ಮಹಂತ ದೇಶೀಕೇಂದ್ರ ಸ್ವಾಮೀಜಿ, ವಿರಕ್ತಮಠದ ಶ್ರೀಗಳು, ಸಾಲೂರು ಶ್ರೀಗಳು, ಕಡೇನಂದಿಹಳ್ಳಿ ಶ್ರೀಗಳು, ಶಿರಾಳಕೊಪ್ಪದ ಶ್ರೀಗಳು, ತಿಪ್ಪಾಯಿಕೊಪ್ಪದ ಕಣಸೋಗಿ ಶ್ರೀಗಳು, ಮರಾಠಾ ಸಮಾಜ, ಬಂಜಾರ ಸಮಾಜದ ಶ್ರೀಗಳು, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಪ್ರಭು ಚವ್ಹಾಣ್, ಬಿ.ಸಿ.ಪಾಟೀಲ್, ಎಂಎಲ್ಸಿ ಸಿ.ಟಿ.ರವಿ, ರೂಪಾಲಿ ನಾಯಕ್, ಪಿ.ಸಿ.ಮೋಹನ್, ನಾರಾಯಣಸ್ವಾಮಿ, ಶಾಸಕ ಚನ್ನಬಸಪ್ಪ, ಸಿದ್ದು ಪಾಟೀಲ್, ಎ.ಎಸ್. ಪದ್ಮನಾಭ ಭಟ್, ಕೆ.ಎಸ್.ಗುರುಮೂರ್ತಿ ಇತರರಿದ್ದರು.




LATEST NEWS
- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

- ವಾಸವಿ ಯುವಜನ ಸಂಘದ ಅಧ್ಯಕ್ಷರಾಗಿ ಶ್ರೀನಾಗ್, ಕನ್ನಿಕಾ ಸಖಿಯರ ಸಂಘದ ಅಧ್ಯಕ್ಷ ಶ್ವೇತಾ ಸಂದೀಪ್

About The Editor
ನಿತಿನ್ ಆರ್.ಕೈದೊಟ್ಲು





