ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 10 ಮೇ 2019
ಗೆಲ್ಲುವ ಅಭ್ಯರ್ಥಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸದಿದ್ದರೂ, ಅವರ ಮನೆಗೆ ಹೋಗಿ ಕರೆತರುವ ಕೆಲಸ ಆಗಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಭದ್ರಕೋಟೆಯಾಗಿರುವ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಮೇಲೆ ಇಡೀ ರಾಜ್ಯದ ಜನರ ಗಮನವಿದೆ. ಕಾರ್ಯಕರ್ತರು ನಿಷ್ಠೆಯಿಂದ ಪ್ರಚಾರ ನಡೆಸಬೇಕು ಎಂದರು.
ಶಾಸಕರಾದ ಹಾಲಪ್ಪ ಮತ್ತು ಕುಮಾರ್ ಬಂಗಾರಪ್ಪ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದೇನೆ. ಈಗಲೇ ಪ್ರಚಾರ ಆರಂಭಿಸುವಂತೆ ತಿಳಿಸಿದ್ದೇನೆ ಎಂದ ಯಡಿಯೂರಪ್ಪ, ಕಾರ್ಯಕರ್ತರೊಂದಿಗೆ ಚರ್ಚಿಸಿ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.
ಇದೇ ವೇಳೆ, ತಾಲೂಕು ಕಾಂಗ್ರೆಸ್’ನ ಮುಖಂಡ ಹುಚ್ರಾಯಪ್ಪ ಬಿಜೆಪಿ ಸೇರ್ಪಡೆಯಾದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಮುಖಂಡರಾದ ಹಾಲಪ್ಪ, ಈಶ್ವರಪ್ಪ, ಡಾ.ಅಮ್ಜದ್ ಹುಸೇನ್, ಟಿ.ಎಸ್.ಮೋಹನ್ ಸೇರಿದಂತೆ ಹಲವರು ಸಭೆಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





