ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕುಂಸಿ: ಹಾರನಹಳ್ಳಿ ಗ್ರಾಮದಲ್ಲಿ ಬೀಗ ಹಾಕಿದ್ದ ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಸುಮಾರು ₹15 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ ಆಭರಣಗಳು (gold and silver) ಹಾಗೂ ನಗದು ದೋಚಿದ್ದಾರೆ. ಈ ಸಂಬಂಧ ಹಾರನಹಳ್ಳಿಯ ಈಶ್ವರ್ ಎಂಬುವವರು ಕುಂಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಈಶ್ವರ ಅವರು ಕುಟುಂಬದೊಂದಿಗೆ ಫೆಬ್ರವರಿ 24ರಂದು ಸಂಜೆ 5:30ಕ್ಕೆ ತಮ್ಮ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗದ ಮಾರಿಕಾಂಬ ಜಾತ್ರೆಗೆ ತೆರಳಿದ್ದರು. ರಾತ್ರಿ 9 ಗಂಟೆಗೆ ಮನೆಗೆ ಹಿಂತಿರುಗಿದಾಗ, ಮನೆಯ ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ಬೀಗ ಒಡೆದಿರುವುದು ಕಂಡುಬಂದಿದೆ. ಮನೆಯ ಒಳಗೆ ಹೋಗಿ ನೋಡಿದಾಗ ಬೆಡ್ರೂಮ್ನಲ್ಲಿದ್ದ ಬೀರುವನ್ನು ತೆರೆದು ಕಳ್ಳತನ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.
ಕಳ್ಳರು ಬೀರುವಿನಲ್ಲಿದ್ದ ಚಿನ್ನದ ಸರಗಳು, ಉಂಗುರಗಳು, ಓಲೆಗಳು ಹಾಗೂ ಬೆಳ್ಳಿಯ ದೇವರ ಮುಖವಾಡಗಳು ಮತ್ತು ಕರಡಿಗೆಗಳನ್ನು ದೋಚಿದ್ದಾರೆ. ಇದರೊಂದಿಗೆ ಬೀರುವಿನಲ್ಲಿದ್ದ ₹40,000 ನಗದು ಕಳ್ಳತನವಾಗಿವೆ. ಕಳುವಾದ ಒಟ್ಟು ಮೌಲ್ಯ ₹15,00,000 ಅಂದಾಜಿಸಲಾಗಿದೆ. ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ – ಮೊಬೈಲ್ ಕ್ಯಾಂಟೀನ್ ಯೋಜನೆ, ಅರ್ಜಿ ಆಹ್ವಾನಿಸಿದ ಪ್ರವಾಸೋದ್ಯಮ ಇಲಾಖೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





