SHIVAMOGGA LIVE NEWS | 17 AUGUST 2023
HOLEHONNURU : ತೋಟದಲ್ಲಿ ಅಡಿಕೆ ಕಳ್ಳತನ (Adike Theft) ಮಾಡಿಕೊಂಡು ಹೋಗುತ್ತಿದ್ದವರನ್ನು ಗ್ರಾಮಸ್ಥರೆ ಬೆನ್ನಟ್ಟಿ ಹಿಡಿದಿದ್ದಾರೆ. ಮೂವರ ಪೈಕಿ ಒಬ್ಬಾತ ತಪ್ಪಿಸಿಕೊಂಡಿದ್ದು, ಇನ್ನಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೊಳೆಹೊನ್ನೂರು ಸಮೀಪದ ಹೊಸ ಜಂಭರಗಟ್ಟೆ (Hosa Jambharaghatta) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಎಂಬುವವರ ತೋಟದಿಂದ ರಾತ್ರಿ ಅಡಿಕೆ ಕಳ್ಳತನ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಂಜಪ್ಪ ಅವರಿಗೆ ಮಾಹಿತಿ ತಿಳಿಸಿದ್ದರು. ಗ್ರಾಮಸ್ಥರ ಜೊತೆಗೆ ನಂಜಪ್ಪ ಅವರು ಕಳ್ಳರನ್ನು ಹಿಡಿಯಲು ಮುಂದಾದಾಗ ಬಾಬು ಎಂಬಾತ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ – ಸ್ನೇಹಿತನ ಮಗನ ಅಪಹರಣ, ಕುಮದ್ವತಿಯಲ್ಲಿ ಮುಳುಗಿಸಿ ಕೊಲೆ, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ನ್ಯಾಯಾಲಯ
ಅಣ್ಣಪ್ಪ ಮತ್ತು ಮಂಜು ಎಂಬುವವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಅವರ ಬಳಿ ಸುಮಾರು 10 ಕೆ.ಜಿ. ಹಸಿ ಅಡಿಕೆ (Adike Theft) ಪತ್ತೆಯಾಗಿದೆ. ಘಟನೆ ಸಂಬಂಧ ನಂಜಪ್ಪ ಅವರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200