ರಾತ್ರೋರಾತ್ರಿ ಅಡಿಕೆ ಕಳ್ಳತನ ಮಾಡುತ್ತಿದ್ದವರನ್ನು ಬೆನ್ನಟ್ಟಿ ಹಿಡಿದ ಗ್ರಾಮಸ್ಥರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 AUGUST 2023

HOLEHONNURU : ತೋಟದಲ್ಲಿ ಅಡಿಕೆ ಕಳ್ಳತನ (Adike Theft) ಮಾಡಿಕೊಂಡು ಹೋಗುತ್ತಿದ್ದವರನ್ನು ಗ್ರಾಮಸ್ಥರೆ ಬೆನ್ನಟ್ಟಿ ಹಿಡಿದಿದ್ದಾರೆ. ಮೂವರ ಪೈಕಿ ಒಬ್ಬಾತ ತಪ್ಪಿಸಿಕೊಂಡಿದ್ದು, ಇನ್ನಿಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೊಳೆಹೊನ್ನೂರು ಸಮೀಪದ ಹೊಸ ಜಂಭರಗಟ್ಟೆ (Hosa Jambharaghatta) ಗ್ರಾಮದಲ್ಲಿ ಘಟನೆ ಸಂಭವಿಸಿದೆ. ನಂಜಪ್ಪ ಎಂಬುವವರ ತೋಟದಿಂದ ರಾತ್ರಿ ಅಡಿಕೆ ಕಳ್ಳತನ ಮಾಡಲಾಗುತ್ತಿತ್ತು. ಇದನ್ನು ಗಮನಿಸಿದ ಗ್ರಾಮಸ್ಥರು ನಂಜಪ್ಪ ಅವರಿಗೆ ಮಾಹಿತಿ ತಿಳಿಸಿದ್ದರು. ಗ್ರಾಮಸ್ಥರ ಜೊತೆಗೆ ನಂಜಪ್ಪ ಅವರು ಕಳ್ಳರನ್ನು ಹಿಡಿಯಲು ಮುಂದಾದಾಗ ಬಾಬು ಎಂಬಾತ ಓಡಿ ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಸ್ನೇಹಿತನ ಮಗನ ಅಪಹರಣ, ಕುಮದ್ವತಿಯಲ್ಲಿ ಮುಳುಗಿಸಿ ಕೊಲೆ, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ನ್ಯಾಯಾಲಯ

ಅಣ್ಣಪ್ಪ ಮತ್ತು ಮಂಜು ಎಂಬುವವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಅವರ ಬಳಿ ಸುಮಾರು 10 ಕೆ.ಜಿ. ಹಸಿ ಅಡಿಕೆ  (Adike Theft) ಪತ್ತೆಯಾಗಿದೆ. ಘಟನೆ ಸಂಬಂಧ ನಂಜಪ್ಪ ಅವರು ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 17, 2023

Leave a Comment