ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌ ಜಿಲ್ಲಾ ಪೊಲೀಸ್‌ ಇಲಾಖೆಗೆ ಪತ್ರ ಕಳುಹಿಸಿದ್ದಾರೆ.

ಯಾವ ವರದಿ? ಏನಿದು ಪ್ರಕರಣ?

ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿತ್ತು. ಕೆರೆಯಿಂದ ಅಕ್ರಮವಾಗಿ ಮಣ್ಣು ತೆಗೆದು ಖಾಸಗಿ ಲೇಔಟ್‌ಗಳಿಗೆ ಸಾಗಿಸಲಾಗಿದೆ. 500 ಲೋಡ್‌ ಮಣ್ಣು ತೆಗೆಯಲು ಅನುಮತಿ ಪಡೆದು 15,004 ಲೋಡ್‌ ಮಣ್ಣು ಸಾಗಿಸಲಿದೆ. ಇದರಿಂದ ಸರ್ಕಾರಕ್ಕೆ 71.45 ಲಕ್ಷ ರೂ. ನಷ್ಟವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಲಯ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ಈ ಸಂಬಂಧ ವರದಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ನ್ಯಾಯಾಲಯ ಸೂಚಿಸಿತ್ತು.

ಬಂಧನಕ್ಕೆ ವಾರಂಟ್‌ ಜಾರಿ

ಆ.13ರಂದು ಪತ್ರಿಕೆಯಲ್ಲಿ ಆರೋಪ ಮಾಡಲಾಗಿದೆ. ಇದರ ಕುರಿತು ವಿಸ್ತೃತ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಿದ್ದರೂ ಜಿಲ್ಲಾ ಪಂಚಾಯಿತಿ ಸಿಇಒ ನ್ಯಾಯಾಲಯಕ್ಕೆ ವರದಿ ಸಲ್ಲಿಸಿಲ್ಲ. ಆದ್ದರಿಂದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ದಸ್ತಗಿರಿ ಮಾಡುವಂತೆ ನ್ಯಾಯಾಲಯ ಆದೇಶಿಸಿದ. ಫೆ.16ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು. 25 ಸಾವಿರ ರೂ. ಮುಚ್ಚಳಿಕೆ ಬರೆದು ಕೊಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ದಿಢೀರ್‌ ರದ್ದು, ಟರ್ಮಿನಲ್‌ನಲ್ಲೇ ಪ್ರಯಾಣಿಕರ ಪ್ರತಿಭಟನೆ, ಅಧಿಕಾರಿಗಳಿಗೆ ತರಾಟೆ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment